ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಶಾಂತಾ ಕುಂಟಿನಿ ಪ್ರಥಮ

0

ಪುತ್ತೂರು: ಒಡಿಯೂರು ಶ್ರೀ ಗಳವರ ಜನ್ಮ ದಿನೋತ್ಸವ ಸಮಿತಿಯ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಕವಿ, ಸಾಹಿತಿ ಶಾಂತಾ ಕುಂಟಿನಿ ಪ್ರಥಮ ಬಹುಮಾನ ಪಡೆದಿದ್ದಾರೆ. ಅಲ್ಲದೆ ಒಡಿಯೂರು ಕ್ಷೇತ್ರದಲ್ಲಿ ನಡೆದ ಜಿಲ್ಲಾ ಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಇವರು ದ್ವಿತೀಯ ಬಹುಮಾನ ಗಳಿಸಿದ್ದಾರೆ.

ಒಡಿಯೂರು ಕ್ಷೇತ್ರದಲ್ಲಿ ನಡೆದ ಶ್ರೀ ಗುರು ದೇವಾನಂದ ಸ್ವಾಮೀಜಿಯವರ ಜನ್ಮ ದಿನೋತ್ಸವ, ಗುರುವಂದನೆ ಹಾಗೂ ಶ್ರೀ ಮಾತಾ ಅನ್ನಛತ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ಶಾಂತಾ ಸಭಾಭವನದ ಮಾಲಕರೂ ಆಗಿರುವ ಶಾಂತಾ‌‌ ಕುಂಟಿನಿಯವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಒಡಿಯೂರಿನ ಸಾಧ್ವಿ ಮಾತಾನಂದಮಯೀ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here