ವಿಟ್ಲಮುಡ್ನೂರು ಗ್ರಾ.ಪಂ. ಸದಸ್ಯನಿಗೆ ಹಲ್ಲೆ ಪ್ರಕರಣ – ಇಬ್ಬರು ಆರೋಪಿಗಳ ಬಂಧನ

0

ವಿಟ್ಲ: ಗ್ರಾ. ಪಂ ಸದಸ್ಯ ಪುನೀತ್ ಮಾಡತ್ತಾರ್ ರವರಿಗೆ ಹಲ್ಲೆ ನಡೆಸಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಕೇಪು ಗಣೇಶ ಮತ್ತು ನಿಶಾಂತ್ ಶೆಟ್ಟಿ ನೀರುಮಾರ್ಗ ರವರು ಬಂಧಿತ ಆರೋಪಿಗಳಾಗಿದ್ದಾರೆ.

ವಿಟ್ಲದ ಚಂದಳಿಕೆ ಮಾಡತ್ತಡ್ಕ ರಸ್ತೆಯಲ್ಲಿ ಆ.೯ರಂದು ಈ ಘಟನೆ ನಡೆದಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ಮಾಹಿತಿ ಲಬಿಸಿದೆ.

LEAVE A REPLY

Please enter your comment!
Please enter your name here