ಪುತ್ತೂರು : ರಾಜ್ಯಸಭಾ ಸದಸ್ಯರಾಗಿ ನೇಮಕಗೊಂಡ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಗೆ ಪುತ್ತೂರು ಕೋಟಿಚೆನ್ನಯ ಕಂಬಳ ಸಮಿತಿ ವತಿಯಿಂದ ಧರ್ಮಸ್ಥಳದಲ್ಲಿ ಸನ್ಮಾನಿಸಲಾಯಿತು. ಕೋಟಿಚೆನ್ನಯ ಕಂಬಳ ಸಮಿತಿ ಪದಾಧಿಕಾರಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರು ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಸನ್ಮಾನಿಸಿದರು. ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ದಿನೇಶ್ ಪಿ.ವಿ., ಖಜಾಂಜಿ ಹಾಗೂ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಉಪಾಧ್ಯಕ್ಷ ನಿರಂಜನ್ ರೈ ಮಠಂತಬೆಟ್ಟು, ಶಿವರಾಮ ಆಳ್ವ ಕುರಿಯ, ಪ್ರವೀಣ್ಚಂದ್ರ ಆಳ್ವ, ಮುರಳೀಧರ ರೈ ಮಠಂತಬೆಟ್ಟು, ಜಯಪ್ರಕಾಶ ಬದಿನಾರು, ಜಿನ್ನಪ್ಪ ಪೂಜಾರಿ ಮುರ, ಶಶಿಕುಮಾರ್ ರೈ ನೂಜಿಬೈಲು, ರೋಶನ್ ರೈ ಬನ್ನೂರು, ಶೀನಪ್ಪ ಪೂಜಾರಿ ಪಡ್ನೂರು, ಲೋಕೇಶ್ ಗೌಡ ಪಡ್ಡಾಯೂರು ಮೊದಲಾದವರು ಉಪಸ್ಥಿತರಿದ್ದರು.