ಪುತ್ತೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಕಾರಣ, ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.
ಕೋವಿಡ್ ನಿಯಂತ್ರಣ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಮಾತನಾಡಿ, “ರಾಜ್ಯದಲ್ಲಿ ಇನ್ನು ಮುಂದೆ ಮಾಸ್ಕ್ ಎಲ್ಲರೂ ಧರಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು. ಕೊರೋನಾ ಹೆಚ್ಚಳ ಕಾರಣದಿಂದಾಗಿ 60 ವರ್ಷ ಮೇಲ್ಪಟ್ಟವರು ತಪ್ಪದೇ ಶೀಘ್ರವೇ 3ನೇ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆಯಬೇಕು ಎಂದು ಹೇಳಿದರು.