ಪುತ್ತೂರು: ನಗರಸಭೆ ಮತ್ತು ತಾಲೂಕು ಆರೋಗ್ಯ ಇಲಾಖೆ ಜಂಟಿಯಾಗಿ ಪುತ್ತೂರಿನಲ್ಲಿ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಜಾಥಾ ಆ.12 ರಂದು ಪುತ್ತೂರು ಪೇಟೆಯಲ್ಲಿ ನಡೆಯಿತು. ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ರೂಟ್ ಮಾರ್ಚ್ ನಡೆಯಿತು.
ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು, ಪೌರ ಕಾರ್ಮಿಕರು, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ, ಸಿಬ್ಬಂದಿಗಳು ಭಾಗವಹಿಸಿದರು.
ಜಾಥಾವು ಕಿಲ್ಲೆ ಮೈದಾನಿಂದ ಹೊರಟು ಮುಖ್ಯರಸ್ತೆಯಾಗಿ ಗಾಂಧಿ ಕಟ್ಟೆಯಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಕಿಲ್ಲೆ ಮೈದಾನದಲ್ಲಿ ಸಮಾಪನಗೊಳಿಸಲಾಯಿತು.