ಪುತ್ತೂರು: ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಪಡಿತರ ವಿಭಾಗದಲ್ಲಿ ಸೇಲ್ಸ್ಮ್ಯಾನ್ ಆಗಿ 36 ವರ್ಷಗಳ ಕರ್ತವ್ಯ ಸಲ್ಲಿಸಿ ನಿವೃತ್ತಿಗೊಂಡ ಲಕ್ಷ್ಮಣ ಕೋಡಂಬುರವರಿಗೆ ಸಂಘದ ವತಿಯಿಂದ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು. ಸಂಘದ ಅಧ್ಯಕ್ಷ ಶಶಿಧರ ರಾವ್ ಬೊಳಿಕ್ಕಲರವರು ಶಾಲು, ಹಾರ, ಸ್ಮರಣಿಕೆ,ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಶಿವರಾಮ ಗೌಡ ಇದ್ಯಪೆ, ನಿರ್ದೇಶಕರುಗಳಾದ ಕೃಷ್ಣ ಕುಮಾರ್ ರೈ ಕೆದಂಬಾಡಿಗುತ್ತು, ಎಸ್.ಬಿ.ಜಯರಾಮ ರೈ ಬಳಜ್ಜ, ಶಿವರಾಮ ರೈ ಕಜೆ, ಭಾಸ್ಕರ ಬಲ್ಲಾಳ್ ಕೆದಂಬಾಡಿಬೀಡು, ತಾರಾನಾಥ ಕಂಪ, ಲೀಲಾವತಿ ರೈ ಕೋಡಂಬು, ನಿಮಿತಾ ರೈ ಕೆರೆಮೂಲೆ, ಬಾಬು ಕೋರಂಗ, ವೀರಪ್ಪ ನಾಯ್ಕ ಪಟ್ಟೆತ್ತಡ್ಕ, ಸೂರ್ಯಪ್ರಸನ್ನ ರೈ ಎಂಡೆಸಾಗು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ ಕುಮಾರ್ ರೈ ದೇರ್ಲ ಸ್ವಾಗತಿಸಿ, ವಂದಿಸಿದರು.