ಕೊಕ್ಕಡ : ಅನ್ಯಮತೀಯ ಜೋಡಿ ಪೊಲೀಸ್ ವಶ

0

ಪುತ್ತೂರು : ಕೊಕ್ಕಡ ಸಮೀಪದ ಕಾಪಿನ ಬಾಗಿಲು ಎಂಬಲ್ಲಿ ಅನ್ಯ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಆ.12ರಂದು ಮುಂಜಾನೆ ಬೆಳಕಿಗೆ ಬಂದಿದೆ. ಗದಗ ಮೂಲದ ರಫೀಕ್ (21ವ.) ಎಂಬಾತ ಗದಗ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ ತಂದಿದ್ದು ಖಾಸಗಿ ಲಾಡ್ಜ್ ಬುಕ್ಕಿಂಗ್‌ಗಾಗಿ ಕಾಪಿನ ಬಾಗಿಲು ಎಂಬಲ್ಲಿಗೆ ಬಂದಿದ್ದರು.

ನವ ವಿವಾಹಿತ ಅನ್ಯಮತೀಯ ಜೋಡಿ ಎಂದು ತಿಳಿದ ಲಾಡ್ಜ್ ಸಿಬ್ಬಂದಿಯು ರೂಮ್ ನೀಡಲು ನಿರಾಕರಿಸಿದ್ದಾರೆ. ಆಗ ಅನ್ಯಮತೀಯ ಜೋಡಿ ತಕ್ಷಣ ಅಲ್ಲಿಂದ ಮರಳಿ ಬೆಂಗಳೂರು ಕಡೆಗೆ ಹೋಗಲು ಬಸ್ ಹತ್ತಿದ್ದರು. ಈ ವೇಳೆ ಸುದ್ದಿ ತಿಳಿದ ಹಿಂದೂ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದು ಬಳಿಕ ನೆಲ್ಯಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವತಿಯು ವಿದ್ಯಾ ಸಂಸ್ಥೆಯೊಂದರಲ್ಲಿ ಉಪನ್ಯಾಸಕಿ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here