ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿಗೆ ಚಿನ್ನದ ಕವಚ ಸಮರ್ಪಣೆ

0

ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಆ.12ರಿಂದ ಮೂರು ದಿನ ಶ್ರೀ ಗುರು ಸಾರ್ವಭೌಮರ ೩೫೧ನೇ ಆರಾಧನಾ ಮಹೋತ್ಸವ ಸಂದರ್ಭದಲ್ಲಿ ಆ.12ರಂದು ಭಕ್ತವೃಂದದಿಂದ ರಾಯರ ಬಿಂಬಕ್ಕೆ ಚಿನ್ನದ ಕವಚ ಸಮರ್ಪಣೆ ಮಾಡಲಾಯಿತು.

ಸುಮಾರು ರೂ. 7 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಚಿನ್ನದ ಕವಚನ್ನು ಬೆಳಿಗ್ಗೆ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಪೂಜಾ ಕಾರ್ಯಕ್ರಮಗಳ ಜೊತೆ ಸಂಕಲ್ಪ ಮಾಡಿ ಸಮರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಠದ ಪ್ರಧಾನ ಅರ್ಚಕ ರಾಘವೇಂದ್ರ ಉಡುಪ ಪ್ರಾರ್ಥನೆ ಮಾಡಿದರು. ಮಠದ ಕಾರ್ಯದರ್ಶಿ ಯು.ಪೂವಪ್ಪ ಅವರು ದಾನಿಗಳನ್ನು ಅಭಿನಂದಿಸಿದರು.

LEAVE A REPLY

Please enter your comment!
Please enter your name here