ಆ.15ಕ್ಕೆ ಸೋಮವಾರದ ವಾರದ ಸಂತೆ ರದ್ದು

0

ಪುತ್ತೂರು:ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿ ಆ.15ರಂದು ಕಿಲ್ಲೆ ಮೈದಾನದಲ್ಲಿ ಆಚರಿಸಲಾಗುವ ಸ್ವಾತಂತ್ರ‍್ಯೋತ್ಸವದ ಹಿನ್ನೆಲೆಯಲ್ಲಿ ಆ ದಿನ ನಡೆಯುವ ಸೋಮವಾರದ ಸಂತೆಯನ್ನು ರದ್ದು ಗೊಳಿಸಲಾಗಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ತಿಳಿಸಿದ್ದಾರೆ.
ಸಂತೆ ವ್ಯಾಪಾರಸ್ಥರು ಕಿಲ್ಲೆ ಮೈದಾನದ ಒಳಗೆ ಮತ್ತು ರಸ್ತೆ ಬದಿಗಳಲ್ಲಿ ವ್ಯಾಪಾರವನ್ನು ಕಡ್ಡಾಯವಾಗಿ ನಡೆಸಬಾರದು ಎಂದು ಅವರು ತಿಳಿಸಿದ್ದಾರೆ.ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸುವಂತೆ ಅವರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here