ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಜಾಥಾ

0

ಪುತ್ತೂರು:  ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ, ಮಾಯಿದೆ ದೇವುಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಸಂತ ವಿಕ್ಟರ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಜಾಥಾವನ್ನು ಏರ್ಪಡಿಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಗಳ ಸಂಚಾಲಕರಾದ ಅ|ವಂ| ಲಾರೆನ್ಸ್ ಮಸ್ಕರೇನ್ಹಸ್‌ರವರು ಮಾಡಿ ವಿದ್ಯಾರ್ಥಿಗಳಿಗೆ ಶುಭ ನುಡಿದರು. ತದನಂತರ ಮೂರು ಶಾಲಾ ನಾಯಕರಿಗೆ ಧ್ವಜವನ್ನು ಹಸ್ತಾಂತರಿಸಿದರು.

ಮೂರು ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹ ಹುರುಪಿನಿಂದ ಈ ಜಾಥಾದಲ್ಲಿ ಪಾಲ್ಗೊಂಡರು. ರಾಷ್ಟ್ರಧ್ವಜವನ್ನು ಬಾನೆತ್ತರಕ್ಕೆ ಹಾರಿಸಿ, ಘೋಷಣೆಗಳು ಕೂಗಿ ದಾರಿಯುದ್ದಕ್ಕೂ ರಾಷ್ಟ್ರಕ್ಕಾಗಿ ಪ್ರಾಣತೆತ್ತ ವೀರ ಹುತಾತ್ಮರನ್ನು ಸ್ಮರಣೆ ಮಾಡಿದರು.

ಸಿ.ಆರ್.ಸಿ. ಶ್ರೀಮತಿ ಶಶಿಕಲಾ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರು, ಮೂರು ಶಾಲೆಯ ಮುಖ್ಯಸ್ಥರು, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here