ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 269 ಪ್ರಕರಣ ಇತ್ಯರ್ಥ. ರೂ.2.52 ಕೋಟಿ ಪರಿಹಾರ ಮೊತ್ತ ವಿತರಣೆಗೆ ಅದೇಶ

0

  • ವಿವಿಧ ನ್ಯಾಯಾಲಯಗಳಲ್ಲಿ ಇತ್ಯರ್ಥವಾದ ಪ್ರಕರಣಗಳು
  •  ಜಿಲ್ಲಾ ನ್ಯಾಯಾಲಯ-16
  •  ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯ-97
  •  ಹೆಚ್ಚುವರಿ ಸಿವಿಲ್-72
  •  ಪ್ರಧಾನ ಸಿವಿಲ್, ಜೆಎಂಎಫ್‌ಸಿ-57
  •  ಅಪರ ಸಿವಿಲ್, ಜೆಎಂಎಫ್‌ಸಿ-4
  •  2ನೇ ಹೆಚ್ಚುವರಿ ಸಿವಿಲ್, ಜೆಎಂಎಫ್‌ಸಿ-23

ಪುತ್ತೂರು:ನ್ಯಾಯಾಲಯದಲ್ಲಿ ಹೂಡಿರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಆ.13ರಂದು ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪುತ್ತೂರಿನಲ್ಲಿ ಒಟ್ಟು 630 ಪ್ರಕರಣಗಳ ಪೈಕಿ 269 ಪ್ರಕರಣಗಳನ್ನು ರಾಜಿಯಲ್ಲಿ ಇತ್ಯರ್ಥಗೊಳಿಸಿ ಫಲಾನುಭವಿಗಳಿಗೆ ರೂ.2,52,34,770 ಪರಿಹಾರ ಮೊತ್ತವನ್ನು ವಿತರಿಸಲು ಆದೇಶಿಸಲಾಗಿದೆ.
ಲೋಕ ಅದಾಲತ್‌ನಲ್ಲಿ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಳಿಸುವ, ಚೆಕ್ ಬೌನ್ಸ್, ವಿಮಾ ಹಣದ ಪ್ರಕರಣ, ಬ್ಯಾಂಕ್ ಹಾಗೂ ಇತರ ಕಂಪನಿಗಳೊಂದಿಗೆ ಇರುವ ವ್ಯಾಜ್ಯಗಳಲ್ಲಿ ಕಕ್ಷಿದಾರರು ಒಪ್ಪುವ ರೀತಿಯಲ್ಲಿ ಇತ್ಯರ್ಥ ಮಾಡುವ ಪ್ರಯತ್ನ ನಡೆಯಿತು.
5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಓAಕಾರಪ್ಪ ಅವರ ನ್ಯಾಯಾಲಯದಲ್ಲಿ 91 ಪ್ರಕರಣಗಳಲ್ಲಿ 16 ಪ್ರಕರಣ ಇತ್ಯರ್ಥಗೊಂಡಿದೆ.ರೂ.51.16 ಲಕ್ಷ ಸೆಟ್ಲ್ಮೆಂಟ್ ಆಗಿದೆ.ಪುತ್ತೂರು ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶ ಮತ್ತು ಹೆಚ್ಚುವರಿ ಮುಖ್ಯ ನಾಯಿಕ ದಂಡಾಧಿಕಾರಿ ಗೌಡ ಆರ್.ಪಿ ಅವರ ನ್ಯಾಯಾಲಯದಲ್ಲಿ 207 ಪ್ರಕರಣಗಳಲ್ಲಿ 97 ಇತ್ಯರ್ಥಗೊಂಡಿದೆ.ರೂ.50,49,300 ಸೆಟ್ಲ್ಮೆಂಟ್ ಆಗಿದೆ.ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ 126 ಪ್ರಕರಣಗಳಲ್ಲಿ 72 ಪ್ರಕರಣಗಳು ಇತ್ಯರ್ಥಗೊಂಡಿದೆ. ರೂ.40,90,700 ಸೆಟ್ಲ್ಮೆಂಟ್ ಆಗಿದೆ.ಪ್ರಧಾನ ಸಿವಿಲ್ ನ್ಯಾಯಾಲಯ, ಜೆಎಮ್‌ಎಫ್‌ಸಿ ಅರ್ಚನಾ ಅವರ ನ್ಯಾಯಾಲಯದಲ್ಲಿ 127 ಪ್ರಕರಣಗಳಲ್ಲಿ 57 ಪ್ರಕರಣಗಳು ಇತ್ಯರ್ಥಗೊಂಡಿದ್ದು ರೂ.90,37,351 ಸೆಟ್ಲ್ಮಂಟ್ ಆಗಿದೆ.ಅಪರ ಸಿವಿಲ್ ನ್ಯಾಯಾಧೀಶ ಮತ್ತು ಜೆಎಮ್‌ಎಫ್‌ಸಿ ಶಿವಣ್ಣ ಹೆಚ್.ಆರ್ ಅವರ ನ್ಯಾಯಾಲಯದಲ್ಲಿ 25 ಪ್ರಕರಣಗಳಲ್ಲಿ 4 ಇತ್ಯರ್ಥಗೊಂಡಿದ್ದು, ರೂ.400 ಸೆಟ್ಲ್ಮೆಂಟ್ ಆಗಿದೆ.2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಜೆಎಮ್‌ಎಫ್‌ಸಿ ಯೋಗೀಂದ್ರ ಶೆಟ್ಟಿ ಅವರ ನ್ಯಾಯಾಲಯದಲ್ಲಿ 54 ಪ್ರಕರಣಗಳಲ್ಲಿ 23 ಪ್ರಕರಣ ಇತ್ಯರ್ಥಗೊಂಡಿದ್ದು, ರೂ.19,41,019 ಸೆಟ್ಲ್ಮೆಂಟ್ ಆಗಿದೆ.ಪುತ್ತೂರಿನ 6 ನ್ಯಾಯಾಲಯಗಳಲ್ಲಿ ಒಟ್ಟು 269 ಪ್ರಕರಣಗಳು ಇತ್ಯರ್ಥಗೊಂಡಿದ್ದು, ರೂ. 2,52,34,770 ಮೊತ್ತವನ್ನು ಫಲಾನುಭವಿಗಳಿಗೆ ಪರಿಹಾರವಾಗಿ ವಿತರಿಸಲು ಆದೇಶಿಸಲಾಗಿದೆ.ಪ್ರಕರಣಗಳ ಇತ್ಯರ್ಥಕ್ಕೆ ಸಂಧಾನಕಾರರಾಗಿ ನ್ಯಾಯವಾದಿಗಳಾದ ರಾಕೇಶ್ ಜೆ ಮಸ್ಕರೇನ್ಹಸ್, ರಾಘವೇಂದ್ರ ನಾಯಕ್, ಮಮತಾ ಸುವರ್ಣ ಬಿ, ವೆಂಕಟೇಶ್ ಎಸ್, ಗೌರೀಶ್ ಕಂಪ ಸಹಕರಿಸಿದರು.ಸದ್ರಿ ವ್ಯಾಜ್ಯಗಳಲ್ಲಿ ಸಂಧಾನಕಾರ ವಕೀಲರನ್ನು ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ.ಅವರು ನೇಮಕ ಮಾಡಿದ್ದರು.

ಜಿಲ್ಲೆಯಲ್ಲಿ 30,729 ಪ್ರಕರಣ ಇತ್ಯರ್ಥ
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯಲ್ಲಿ ಒಟ್ಟು 30,729 ಪ್ರಕರಣಗಳನ್ನು ರಾಜಿಯಲ್ಲಿ ಇತ್ಯರ್ಥಪಡಿಸಲಾಗಿದೆ.
ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 47 ಬೈಠಕ್‌ಗಳು ನಡೆದಿದ್ದು, 35,649 ಪ್ರಕರಣಗಳನ್ನು ಪರಿಗಣಿಸಲಾಗಿತ್ತು. ಆ ಪೈಕಿ 30,729 ಪ್ರಕರಣಗಳನ್ನು ರಾಜಿಯಲ್ಲಿ ಇತ್ಯರ್ಥಪಡಿಸಲಾಗಿದ್ದು, 18,92,57,121 ರೂ. ಪರಿಹಾರದ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ರವೀಂದ್ರ ಎಂ. ಜೋಷಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ ಬಿ.ಜಿ. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here