ಪುತ್ತೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಬಿಜೆಪಿ ವತಿಯಿಂದ ರಾಷ್ಟ್ರಧ್ವಜ ಹಿಡಿದು ಕೊಂಡು ಪಾದಯಾತ್ರೆ ಬೊಳುವಾರಿನಿಂದ ಆರಂಭಗೊಂಡಿತು.
ಹಿರಿಯರಾದ ಬಾಲಕೃಷ್ಣ ಮುಗುರೋಡಿ ಮತ್ತು ಡಾ.ಎಂ.ಕೆ.ಪ್ರಸಾದ್ ಅವರು ಶಾಸಕ ಸಂಜೀವ ಮಠಂದೂರು ಅವರಿಗೆ ರಾಷ್ಟ್ರಧ್ವಜ ಹಸ್ತಾಂತರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು.