ವಿವೇಕಾನಂದ ಪದವಿಪೂರ್ವಕಾಲೇಜಿನಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಕಾರ್ಯಕ್ರಮ

0

ಪರಿಸರ ಸಂರಕ್ಷಣೆ ನಮ್ಮೆಲ್ಲರಕರ್ತವ್ಯ- ಡಾ. ಶ್ರೀಶ ಕುಮಾರ್

ಪುತ್ತೂರು: ಪರಿಸರಕ್ಕೆಆಗುತ್ತಿರುವ ಹಾನಿಯನ್ನುಅರಿತುಅದರ ಸಂರಕ್ಷಣೆಯ ಬಗ್ಗೆಯೂಆಲೋಚಿಸಬೇಕಾದಾದುಅತ್ಯಗತ್ಯ.ಮಾನವ ಪರಿಸರದ ಶಿಶು.ಪರಿಸರವಿಲ್ಲದೆ ಮಾನವನಜೀವನಕ್ಕೆಯಾವುದೇ ಬೆಲೆಯಿರುವುದಿಲ್ಲ. ಹಾಗಾಗಿ ಪ್ರತಿಯೊಬ್ಬರೂ ಪರಿಸರದ ಬಗ್ಗೆ ಕಾಳಜಿ ವಹಿಸಿ ಕಾಪಾಡಬೇಕಾದುದುನಮ್ಮೆಲ್ಲರಕರ್ತವ್ಯಎಂದುವಿವೇಕಾನಂದ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಡಾ. ಶ್ರೀಶ ಕುಮಾರ್ ಹೇಳಿದರು.

ವಿವೇಕಾನಂದ ಪದವಿಪೂರ್ವಕಾಲೇಜಿನಲ್ಲಿ ವಿಜ್ಞಾನ ಮತ್ತು ಇಕೋ ಕ್ಲಬ್ ವತಿಯಿಂದಆಯೋಜಿಸಲಾದ ಪರಿಸರ ಸಂರಕ್ಷಣೆಯಲ್ಲಿ ನಮ್ಮ ಹೊಣೆ ಎಂಬ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಪ್ರಸ್ತುತಜಗತ್ತಿನಲ್ಲಿ ಮಾನವನುಅಭಿವೃದ್ಧಿ ಎಂಬ ಹೆಸರಿನಲ್ಲಿ ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಇದರಿಂದ ಪ್ರಾಣಿಗಳ ಜೀವರಕ್ಷಣೆಗೆ ಹಾನಿಯುಂಟಾಗುತ್ತಿದೆ.ಜಲಮಾಲಿನ್ಯ, ವಾಯುಮಾಲಿನ್ಯ, ಮಣ್ಣಿನ ಮಾಲಿನ್ಯ, ಅರಣ್ಯನಾಶ ಹೀಗೆ ಹತ್ತು ಹಲವು ಸಮಸ್ಯೆಗಳು ಇಂದು ಪರಿಸರದಲ್ಲಿಉಂಟಾಗಿದೆ. ಇದಕ್ಕೆಲ್ಲ ಮೂಲ ಕಾರಣಅಧುನೀಕತೆ, ನಗರಗಳ ಬೆಳವಣಿಗೆ, ಹೆಚ್ಚುತ್ತಿರುವ ಕೈಗಾರಿಕೆಗಳು, ವಿಜ್ಞಾನ -ತಂತ್ರಜ್ಞಾನದಅಭಿವೃದ್ಧಿ ಎಂಬ ಹಲವು ಹೆಸರಿನಲ್ಲಿ ಮಾನವನು ಮಾಡುವ ಪರಿಸರ ನಾಶ. ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ನಾವೆಲ್ಲರೂಕಾರ್ಯಪ್ರವೃತರಾಗಬೇಕು.ನಮ್ಮದೈನಂದಿನ ಜೀವನದಲ್ಲಿ ಕೆಲವೊಂದು ಕ್ರಮಗಳನ್ನು ಅನುಸರಿಸಿದರೆ ಅದೇ ಪರಿಸರ ಉಳಿವಿಗೆ ಸಹಾಯಕವಾಗುತ್ತದೆ. ಹೀಗಾಗಿ ಸ್ವಚ್ಛ ಭಾರತಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು.ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕುಎಂದರು.

ಕಾರ್ಯಕ್ರಮದಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯಡಾ.ಕೆ.ಎನ್ ಸುಬ್ರಹ್ಮಣ್ಯ ಮಾತನಾಡಿ ನಾವು ಹುಟ್ಟಿದಾಗಕಂಡ ಪರಿಸರಕ್ಕೂ ಈಗ ನಾವು ಕಾಣುತ್ತಿರುವ ಪರಿಸರಕ್ಕೂಅಜಗಜಾಂತರ ವ್ಯತ್ಯಾಸಇದೆ.ಆಧುನಿಕಜಗತ್ತಿನಲ್ಲಿತಂತ್ರಜ್ಞಾನದ ಆವಿಷ್ಕಾರದಿಂದ ಇಂದಿನಮಾನವನಜೀವನಹಾಗೂ ಚಟುವಟಿಕೆಗಳುಅತ್ಯಂತಸಂಕೀರ್ಣವಾಗಿವೆ. ಈ ದೃಷ್ಟಿಯಲ್ಲಿ ಇಂದಿನ ಈ ಕಾರ್ಯಕ್ರಮ ಹಾಗೂ ಇದರ ಬಗ್ಗೆ ಅರಿವು ಮೂಡಿಸುವುದುಅತ್ಯಂತ ಮುಖ್ಯವಾಗಿದೆಎಂದರು.

ಕಾರ್ಯಕ್ರಮದಲ್ಲಿತೆಂಕಿಲದವಿವೇಕಾನಂದಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪಡೆದು, ಪಿಯುಸಿಯನ್ನು ವಿವೇಕಾನಂದ ಪದವಿಪೂರ್ವಕಾಲೇಜಿನಲ್ಲಿ ಪೂರೈಸಿ ಇದೀಗ ಭಾರತೀಯ ನೌಕಾಪಡೆಯಲ್ಲಿತರಬೇತಿ ಪಡೆದು, ಭಾರತೀಯ ನೌಕ ಸೇನೆಯಲ್ಲಿ ಸೇವೆ ಸಲ್ಲಿಸಲಿರುವ ಹಿರಿಯ ವಿದ್ಯಾರ್ಥಿಗಳಾದ ಹೃತಿಕ್ (ದೈಹಿಕ ಶಿಕ್ಷಣ ಶಿಕ್ಷಕ ಮೋನಪ್ಪ ಪಟ್ಟೆ ಮತ್ತು ಶ್ರೀಮತಿ ಹರಿಣಾಕ್ಷಿದಂಪತಿ ಪುತ್ರ) , ಚರಣ್ (ನಿವೃತ್ತ ಸೇನಾನಿ ಸಂಪ್ಯ ನಿವಾಸಿ ಜಯರಾಮಗೌಡ ಮತ್ತು ವಾರಿಜ ದಂಪತಿಗಳ ಪುತ್ರ) ಇವರನ್ನುಸಂಸ್ಥೆಯ ವತಿಯಿಂದ ಶಾಲು ಹೊದೆಸಿ, ಸ್ಮರಣಿಕೆ ನೀಡಿಗೌರವಿಸಲಾಯಿತು.
ಕಾರ್ಯಕ್ರಮದಲ್ಲಿಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ, ಜೀವಶಾಸ್ತ್ರ ವಿಭಾಗದ ಮುಖ್ಯಸ್ಥ ಮುರಳಿ ಪಿ.ಜಿ ಉಪಸ್ಥಿತರಿದ್ದರು. ಉಪನ್ಯಾಸಕಿ ದೀಕ್ಷಿತಕಾರ್ಯಕ್ರಮ ನಿರೂಪಿಸಿ ಅತಿಥಿಗಳನ್ನು ಸ್ವಾಗತಿಸಿ ಸ್ನೇಹ ವಂದಿಸಿದರು.

LEAVE A REPLY

Please enter your comment!
Please enter your name here