ವಿಟ್ಲ: ಏಕಾಏಕಿ ಮನೆಗೆ ನುಗ್ಗಿ ಯುವಕನೋರ್ವನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ವಿಟ್ಲದ ಚಂದಳಿಕೆಯ ಕುರುಂಬಳ ಎಂಬಲ್ಲಿ ನಡೆದಿದೆ. ಲೋಕನಾಥ್ ಜೋಗಿ ಎಂಬವರ ಪುತ್ರ ಹೃದಯ್ ಹಲ್ಲೆಗೊಳಗಾದವರು. ರಸ್ತೆಯ ವಿಚಾರವಾಗಿ ವ್ಯಾಟ್ಸಾಪ್ನಲ್ಲಿ ಹಾಕಿದ್ದಾರೆ ಎಂಬುದರ ಕುರಿತಾಗಿ ಜಗಳ ನಡೆದಿದೆ ಎಂದು ತಿಳಿದು ಬಂದಿದೆ. ಗಾಯಾಳುವನ್ನು ವಿಟ್ಲ ಆಸ್ಪತ್ರೆಗೆ ದಾಖಲಿಸಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.