ವಿಟ್ಲ: ಜಾಗದ ವಿಚಾರದಲ್ಲಿ ಹಲ್ಲೆ ಆರೋಪ -ಇಬ್ಬರು ಆಸ್ಪತ್ರೆಗೆ

0

ವಿಟ್ಲ: ಜಾಗದ ವಿಷಯವಾಗಿ ವ್ಯಕ್ತಿಯೋರ್ವರ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಘಟನೆ ವಿಟ್ಲ ಚಂದಳಿಕೆ ಸಮೀಪದ ಕುರುಂಬಲ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಕುರುಂಬಲ ನಿವಾಸಿ ಲೋಕನಾಥ್ ಜೋಗಿ ಮತ್ತು ಅವರ ಮಗ ಹೃದಯ್ ಜೋಗಿ ಗಾಯಗೊಂಡವರಾಗಿದ್ದಾರೆ.
ಜಾಗದ ವಿಷಯವಾಗಿ ಜಗಳ ನಡೆದಿದ್ದು, ಈ ಹಿನ್ನೆಲೆ ಮನೆಗೆ ಅಕ್ರಮ ಪ್ರವೇಶ ಮಾಡಿದ ಪುನೀತ್ ಜೋಗಿ ಮತ್ತು ತ್ಯಾಗರಾಜ್ ಎಂಬವರು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿಕೊಂಡು ಲೋಕನಾಥ್ ಜೋಗಿ ಮತ್ತು ಅವರ ಮಗ ಹೃದಯ್ ಜೋಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಾಹಿತಿ ಲಬಿಸಿದೆ. ಈ ಬಗ್ಗೆ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ವಿಟ್ಲ ಠಾಣಾ ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here