ಪುತ್ತೂರು: ಗಾಂಧಿಕಟ್ಟೆಯಲ್ಲಿ ನಡೆದ 76ನೇ ಸ್ವಾತಂತ್ರ್ಯೋತ್ಸವದಲ್ಲಿ ಶಾಸಕ ಸಂಜೀವ ಮಠಂದೂರು ಧ್ವಜಾರೋಹಣ ನೆರವೇರಿಸಿದರು. ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್, ಸಹಾಯಕ ಆಯುಕ್ತ ಗಿರೀಶ್ ನಂದನ್, ತಹಶೀಲ್ದಾರ್ ನಿಸರ್ಗಪ್ರಿಯ, ಗಾಂಧೀಕಟ್ಟೆ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಆಳ್ವ, ಸಯ್ಯದ್ ಕಮಲ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು. ರಾಮಕೃಷ್ಣ ಪ್ರೌಢಶಾಲಾ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡಿದರು.