ಪುತ್ತೂರು: 75 ನೇ ವರ್ಷದ ಆಜಾದಿಕ್ ಅಮೃತ ಮಹೋತ್ಸವದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಈಶ್ವರಮಂಗಲ ಪಂಚಲಿಂಗೇಶ್ವರ ಪ್ರೌಢಶಾಲಾ ವಿದ್ಯಾರ್ಥಿಗಳು ಈಶ್ವರಮಂಗಲ ಪೇಟೆಯಲ್ಲಿ ಮೆರವಣಿಗೆ ಮೂಲಕ ಸಾಗಿ ಘೋಷಣೆಗಳನ್ನು ಕೂಗಿದರು. ಮಾಜಿ ಯೋಧ ಮಾಲಕೃಷ್ಣ ಕೆ ಪಟ್ಟೆ ಧ್ವಜಾರೋಹಣ ನೆರವೇರಿಸಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲಕೃಷ್ಣ ಕುಂಜತ್ತಾಯ, ಸಂಚಾಲಕ ಸರ್ವತ್ತೋಮ ಬೋರ್ಕರ್, ಮುಖ್ಯೋಪಾಧ್ಯಾಯರು, ಶಿಕ್ಷಕರು ಸೇರಿದಂತೆ ಊರವರು ಪಾಲ್ಗೊಂಡಿದ್ದರು.