ಕೆದಂಬಾಡಿ ಗ್ರಾಪಂ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮ : ಬೋಳೋಡಿಯಲ್ಲಿ ಅಮೃತ ಸರೋವರಕ್ಕೆ ಶಿಲಾನ್ಯಾಸ

0

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ಅಮೃತ ಗ್ರಾಮ ಯೋಜನೆಗೆ ಆಯ್ಕೆಯಾಗಿದ್ದು ಈ ನಿಟ್ಟಿನಲ್ಲಿ ಗ್ರಾಮದ ಬೋಳೋಡಿಯಲ್ಲಿ ಸುಮಾರು ೪೦ ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ಅಮೃತ ಸರೋವರ (ಕೆರೆ)ಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಡಮಜಲು ಸುಭಾಷ್ ರೈಯವರು ಆ.೧೫ ರಂದು ದೀಪ ಬೆಳಗಿಸುವ ಮೂಲಕ ಶಿಲಾನ್ಯಾಸ ನೆರವೇರಿಸಿ ಮಾತನಾಡಿ,ಸ್ವಾತಂತ್ರ್ಯದ ಅಮೃತ ಮಹೋತ್ಸವದ ವರ್ಷದಲ್ಲಿ ಕೆದಂಬಾಡಿಯಲ್ಲಿ ಅಮೃತ ಸರೋವರ ನಿರ್ಮಾಣವಾಗುತ್ತಿರುವ ಶುಭ ಲಕ್ಷಣವಾಗಿದೆ. ಈ ಕೆರೆಯಿಂದ ಗ್ರಾಮದಲ್ಲೂ ನೀರಿನ ಒರತೆ ಹೆಚ್ಚಾಗಲಿ ಎಲ್ಲರಿಗೂ ಶುಭವಾಗಲಿ ಎಂದು ಹೇಳಿ ಶುಭ ಹಾರೈಸಿದರು.

ಉದ್ಯಮಿ ಮಿತ್ರಂಪಾಡಿ ಜಯರಾಮ ರೈ ಅಬುದಾಭಿಯವರು ಗುದ್ದಲಿ ಪೂಜೆ ನೆರವೇರಿಸಿ ಶುಭ ಹಾರೈಸಿದರು. ಗ್ರಾಪಂ ಅಧ್ಯಕ್ಷ ರತನ್ ರೈ ಕುಂಬ್ರರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಪಂ ಉಪಾಧ್ಯಕ್ಷ ಭಾಸ್ಕರ ರೈ ಮಿತ್ರಂಪಾಡಿ ಸೇರಿದಂತೆ ಗ್ರಾಪಂ ಸದಸ್ಯರುಗಳು, ಕೆರೆ ಮೇಲುಸ್ತುವಾರಿ ಸಮಿತಿ ಸದಸ್ಯರುಗಳು, ಸಂಜೀವಿನಿ ಒಕ್ಕೂಟದವರು ಗ್ರಾಮಸ್ಥರು ಉಪಸ್ಥಿತರಿದ್ದರು. ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ ಸ್ವಾಗತಿಸಿ, ವಂದಿಸಿದರು. ಕಾರ್ಯದರ್ಶಿ ಸುನಂದ ರೈ ಹಾಗೂ ಸಿಬ್ಬಂದಿಗಳು ಸಹಕರಿಸಿದ್ದರು.

 

LEAVE A REPLY

Please enter your comment!
Please enter your name here