ಕಡಬ: ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ.
ಹೊಸಮಠ ಸಿ.ಎ.ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್. ಕರುಣಾಕರ ಗೋಗಟೆ ಧ್ವಜಾರೋಹಣ ಮಾಡಲು ಸಿದ್ದತೆ ಮಾಡುತ್ತಿದ್ದಾಗ ಅವರಿಗೆ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ದ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣಕ್ಕೆ ಸಿದ್ದವಾಗುತ್ತಿದ್ದ ವೇಳೆ ಗಂಗಾಧರ ಗೌಡ ಕುಸಿದು ಬಿದ್ದು ಅಸ್ವಸ್ಥಗೊಂಡರು. ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ.