ಭ್ರಷ್ಟಾಚಾರ, ಭಯೋತ್ಪಾದನೆ, ಜಿಹಾದಿ ಸಂಸ್ಕೃತಿ ಹೊಡೆದು ಹಾಕುವಲ್ಲಿ ನಾವೆಲ್ಲ ಪಣತೊಡಬೇಕು – ಬಿಜೆಪಿ ಕಚೇರಿಯಲ್ಲಿ ನಡೆದ ಧ್ವಜಾರೋಹಣದಲ್ಲಿ ಶಾಸಕ ಸಂಜೀವ ಮಠಂದೂರು

0

ಪುತ್ತೂರು: ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಬಲಿದಾನಗೈದವರು ಮತ್ತು ಸ್ವಾತಂತ್ರ್ಯದ ಬಳಿಕ ದೇಶದ ಉಳಿವಿಗಾಗಿ ಹೋರಾಡಿ ಹುತಾತ್ಮರಾದ ಯೋಧರು, ಸಮಾಜ ಸೇವಕರು,ಸಂತರ ತ್ಯಾಗಮಯಿ ಬದುಕು ದೇಶದ ಪ್ರತಿಯೊಬ್ಬ ನಾಗರಿಕ ಅರಿಯಬೇಕು. ಭ್ರಷ್ಟಾಚಾರ, ಭಯೋತ್ಪಾದನೆ, ಜಿಹಾದಿ ಸಂಸ್ಕೃತಿ ಹೊಡೆದು ಹಾಕಲು ನಾವೆಲ್ಲ ಪಣ ತೊಡಬೇಕಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಅವರು ಧ್ವಜಾರೋಹಣ ಮಾಡಿ ಮಾತನಾಡಿದರು. ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ ಮತ್ತೊಮ್ಮೆ ರಾಷ್ಟ್ರಪ್ರೇಮ ಉದ್ದೀಪನಗೊಳಿಸಬೇಕು. ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತದಿಂದ ಪ್ರತಿಯೊಬ್ಬನಿಗೆ ಬದುಕು ಕೊಡುವ ಕೆಲಸ ಆಗಬೇಕೆಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಮಲ್ಲಿಕಾಪ್ರಸಾದ್, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಹಿರಿಯರಾದ ಎಸ್ ಅಪ್ಪಯ್ಯ ಮಣಿಯಾಣಿ, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ತಾ.ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಸೇರಿದಂತೆ ಪಕ್ಷ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here