ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಲೋಕಕಲ್ಯಾಣಾರ್ಥವಾಗಿ ಮತ್ತು ಶ್ರೀದೇವರ ಸಾನ್ನಿಧ್ಯ ವೃದ್ಧಿಗಾಗಿ ಶ್ರೀದೇವರಿಗೆ 3ನೇ ಶ್ರಾವಣ ಶನಿವಾರ ಅಂದರೆ ಸೆ. 3 ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮಹಾರುದ್ರಜಪಾಭಿಷೇಕ ನಡೆಯಲಿದ್ದು, ಕಾರ್ಯಕ್ರಮದ ಸಿದ್ದತೆಗಳ ಪೂರ್ವಭಾವಿ ಸಭೆ ಆ. 13 ರಂದು ದೇವಳದಲ್ಲಿ ನಡೆಯಿತು. ಪುರೋಹಿತ ವೆಂಕಟ್ರಮಣ ಭಟ್ ಮಂಜುಳಗಿರಿಯವರು ಕಾರ್ಯಕ್ರಮದ ಸಮಗ್ರ ಮಾಹಿತಿ ನೀಡಿದರು.
ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಮೊಕ್ತೇಸರ ವಿನೋದ್ ಕುಮಾರ್ ರೈ ಗುತ್ತು, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮನಮೋಹನ ರೈ ಚೆಲ್ಯಡ್ಕ, ಕಾರ್ಯದರ್ಶಿ ವಸಂತಕೃಷ್ಣ ಕೋನಡ್ಕ, ಅರ್ಚಕರಾದ ದಿವಾಕರ ಭಟ್, ವೆಂಕಟ್ರಮಣ ಭಟ್, ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯ ಸದಸ್ಯರು, ಭಕ್ತಾಭಿಮಾನಿಗಳು ಸಲಹೆ ಸೂಚನೆ ನೀಡಿದರು.