ಮಸೂದ್ ಕೊಲೆ ಆರೋಪಿಗಳಿಗೆ ನ್ಯಾಯಾಂಗ ಕಸ್ಟಡಿ ವಿಸ್ತರಣೆ

0

ಸುಳ್ಯ: ಗುಂಪು ಹಲ್ಲೆಗೊಳಗಾಗಿ ಸಾವಿಗೀಡಾದ ಕಳಂಜದ ಮಸೂದ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ನ್ಯಾಯಾಂಗ ಕಸ್ಟಡಿಯಲ್ಲಿದ್ದ ಎಲ್ಲಾ ಆರೋಪಿಗಳಿಗೆ ನ್ಯಾಯಾಂಗ ಕಸ್ಟಡಿ ವಿಸ್ತರಿಸಲಾಗಿದೆ.

ಮಸೂದ್ ಸಾವಿನ ಪ್ರಕರಣಕ್ಕೆ ಸಂಬಂಽಸಿ ಆರೋಪಿಗಳಾದ, ಅಭಿಲಾಶ್, ಸುನಿಲ್ ಕೆ, ಸುಽರ್, ಶಿವಪ್ರಸಾದ್, ರಂಜಿತ್ ಬಿ, ಸದಾಶಿವ ಪೂಜಾರಿ, ರಂಜಿತ್, ಭಾಸ್ಕರ ಕೆ ಎಂ ಇವರ ಮೇಲೆ ಕೊಲೆ ಪ್ರಕರಣ ದಾಖಲಾಗಿದ್ದು, ಬಂಧಿತರಾದ ಆರೋಪಿಗಳು ನ್ಯಾಯಾಂಗ ಕಸ್ಟಡಿಯಲ್ಲಿದ್ದರು. ನ್ಯಾಯಾಂಗ ಕಸ್ಟಡಿಯ ಅವಧಿ ಪೂರ್ಣಗೊಂಡ ಹಿನ್ನಲೆಯಲ್ಲಿ ಆ. 16ರಂದು ಆರೋಪಿಗಳನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಂಗ ಬಂಧನವನ್ನು ಆಗಸ್ಟ್ 29 ರವರೆಗೆ ವಿಸ್ತರಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here