ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ವಿಶ್ವ ಯುವಕ ಮಂಡಲ ಕುಂಬ್ರ ಇದರ ಪ್ರಾಯೋಜಕತ್ವದಲ್ಲಿ ಅಮ್ಮ ಕಲಾವಿದೆರ್ ಕುಂಬ್ರ ಅಭಿನಯಿಸುವ ಕುಶಲ್ದರಸೆ ನವೀನ್ ಡಿ.ಪಡೀಲ್ ಇವರ ಸಲಹೆ ಸಹಕಾರದೊಂದಿಗೆ ‘ರಂಗದ ರಾಜೆ ’ ಸುಂದರ್ ರೈ ಮಂದಾರ ನಿರ್ದೇಶಿಸಿ ಅಭಿನಯಿರುವ ಅಲೇ ಬುಡಿಯರ್ಗೆ…! ತುಳು ಹಾಸ್ಯ ನಾಟಕ ಆ.18 ರಂದು ಕುಂಬ್ರ ಶ್ರೀ ರಾಮ ಭಜನಾ ಮಂದಿರದ ಶ್ರೀರಾಮ ರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ. ಶ್ರೀ ಕೃಷ್ಣ ಅಷ್ಟಮಿಯ ಪ್ರಯುಕ್ತ ಬೆಳಿಗ್ಗೆ ಶ್ರೀಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ಧೆಗಳು, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಭಜನೆ, ರಾತ್ರಿ ವಿಶ್ವ ಯುವಕ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕೂಡ ನಡೆಯಲಿದೆ.
ಪ್ರಥಮ ಪ್ರಯೋಗ
ರಂಗದ ರಾಜೆ ಸುಂದರ ರೈ ಮಂದಾರ ನಿರ್ದೇಶಿಸಿ ಅಭಿನಯಿಸಿರುವ ಅಲೇ ಬುಡಿಯರ್ಗೆ ತುಳು ನಾಟಕದ ಪ್ರಥಮ ಪ್ರದರ್ಶನ ಕುಂಬ್ರದಲ್ಲಿ ನಡೆಯುತ್ತಿದೆ. ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಟಕ ವೀಕ್ಷಿಸಿ ಪ್ರೋತ್ಸಾಹಿಸಬೇಕಾಗಿ ಸಂಘಟಕರು ತಿಳಿಸಿದ್ದಾರೆ.