![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಪಾರ್ಥಸಾರಥಿ ಯುವಕಮಂಡಲದ ವತಿಯಿಂದ ಹದಿನೇಳನೇ ವರ್ಷದ ಕ್ರೀಡಾಕೂಟ ಹಾಗೂ ನಿವೃತ ಯೋಧರಿಗೆ ಸನ್ಮಾನ ಕಾರ್ಯಕ್ರಮ ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದ ವಠಾರದಲ್ಲಿ ನಡೆಯಿತು.
ಬೆಳಗ್ಗೆ ಕ್ಷೇತ್ರದಲ್ಲಿ ವಿಶೇಷ ಪಾರ್ಥನೆ ನಡೆಸಿದ ಬಳಿಕ ಕ್ರೀಡಾಕೂಟಗಳು ಆರಂಭಗೊಂಡಿತು. ಸಾಯಂಕಾಲ ನಡೆದ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ನಿವೃತ್ತ ಯೋಧ ಕೊಡಿಪಾಡಿ ನಿವಾಸಿ ಜಯರಾಮ ಗೌಡರವರನ್ನು ಸನ್ಮಾನಿಸಲಾಯಿತು. ವಿವೇಕಾನಂದ ಕಾಲೇಜಿನ ನಿವೃತ್ತ ಉಪನ್ಯಾಸಕ ಮಹೇಶ್ ರೈ, ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜನಾರ್ದನ ಕೆ. ಎರ್ಕಡಿತ್ತಾಯ, ಸದಸ್ಯರಾದ ಸುದೀರ್ ಪ್ರಸಾದ್ ಆನಾಜೆ, ಪಾರ್ಥಸಾರಥಿ ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಧಾಕೃಷ್ಣ ನಂದನ ಮೊದಲಾದವರು ಉಪಸ್ಥಿತರಿದ್ದರು.
ಗ್ರಾ.ಪಂ.ಸದಸ್ಯ ಗಿರೀಶ್ ನಂದನ ಕಾರ್ಯಕ್ರಮ ನಿರೂಪಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯ ಗಿರಿಧರ ಗೌಡ ಗೋಮುಖ ಸ್ವಾಗತಿಸಿದರು. ದೇವರಾಜ್ ಗಡಿಮಾರ್ ವಂದಿಸಿದರು.