ವಿಟ್ಲ: ಕಾರು ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಮಾಣಿ ಸಮೀಪ ನಡೆದ ಬಗ್ಗೆ ವರದಿಯಾಗಿದೆ. ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ನಡುವೆ ಮಾಣಿಯಲ್ಲಿ ಈ ಅಪಘಾತ ಸಂಭವಿಸಿದೆ.
ಘಟನೆಯಿಂದಾಗಿ ಕಾರು ಚಾಲಕ ಪುತ್ತೂರು ಮೂಲದ ಮಹಾಲಿಂಗ ಎಂಬವರು ಸಣ್ಣ-ಪುಟ್ಟ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ಕಷ್ಟೆ ತಿಳಿದು ಬರಬೇಕಿದೆ.