ವಿದ್ಯಾರ್ಥಿನಿಗೆ ಮೆಸೇಜ್: ಯುವಕನಿಗೆ ಎಚ್ಚರಿಕೆ

0

ಉಪ್ಪಿನಂಗಡಿ: ವಿದ್ಯಾರ್ಥಿನಿಯೋರ್ವಳಿಗೆ ಇನ್ ಸ್ಟ್ಯಾಗ್ರಾಂ ನಲ್ಲಿ ಮೆಸೇಜ್ ಮಾಡಿದ ಆರೋಪದ ಮೇಲೆ ಯುವಕನೋರ್ವನನ್ನು ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಇಲ್ಲಿನ ಕರುವೇಲು ನಿವಾಸಿ ಸಮೀರ್ ಎಂಬಾತ ಖಾಸಗಿ ಶಾಲೆಯ ವಿದ್ಯಾರ್ಥಿನಿಯೋರ್ವಳಿಗೆ ಇನ್ ಸ್ಟ್ಯಾಗ್ರಾಂನಲ್ಲಿ ಮೆಸೇಜ್ ಮಾಡುತ್ತಿದ್ದು, ಇದನ್ನು ಈಕೆ ಹೆತ್ತವರಿಗೆ ತಿಳಿಸಿದ್ದಾಳೆ. ಈ ಬಗ್ಗೆ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ಆತನನ್ನು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ.
ಈತ ಬಸ್ ನಿಲ್ದಾಣ ಬಳಿಯ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದು, ಹೆಣ್ಮಕ್ಕಳ ನಂಬರ್ ಪಡೆದು ಮೆಸೇಜ್, ಫೋನ್ ಮಾಡುವ ಚಾಳಿ ಬೆಳೆಸಿಕೊಂಡಿದ್ದ ಎಂಬ ಆರೋಪ ಈತನ ಮೇಲೆ ಕೇಳಿ ಬಂದಿದೆ.

LEAVE A REPLY

Please enter your comment!
Please enter your name here