ಸವಣೂರು ಪ್ರಾ. ಶಾಲೆಯಲ್ಲಿ ಸನ್ಮಾನ ಸಂಭ್ರಮ

0

ಪುತ್ತೂರು: ಸವಣೂರು ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಸಾತ್ರಂತ್ರದ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಸವಣೂರು ಪರಿಸರದ 5 ಮಂದಿ ವಿವಿಧ ಸಾಧಕರನ್ನು ಸನ್ಮಾನಿಸಿ, ಗೌರವಿಸಲಾಯಿತು. ನಿವೃತ್ತ ಸೈನಿಕ ಪ್ರವೀಣ್ ಕುಮಾರ್ ರೈ, ಕೊಳ್ತಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ನಿವೃತ್ತ ಆರೋಗ್ಯಾಧಿಕಾರಿ ವಾಗೀಶ್ವರಿ, ಪಣೆಮಜಲು ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಿಜಯ ಈಶ್ವರ ಗೌಡ, ಪತ್ರಕರ್ತರುಗಳಾದ ಉಮಾಪ್ರಸಾದ್ ರೈ ನಡುಬೈಲು ಮತ್ತು ಪ್ರವೀಣ್ ಚೆನ್ನಾವರರವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಪುತ್ತೂರು ಎಪಿಎಂಸಿ ಮಾಜಿ‌ ಅಧ್ಯಕ್ಷ ದಿನೇಶ್ ಮೆದು, ಸವಣೂರು ಗ್ರಾ.ಪಂ, ಸದಸ್ಯ ಗಿರಿಶಂಕರ್ ಸುಲಾಯ, ಶಾಲಾ ಎಸ್ ಡಿಎಂಸಿ‌ ಅಧ್ಯಕ್ಷ ಮಹಮ್ಮದ್ ಹನೀಫ್, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಶಾಲಾ ಮುಖ್ಯ ಶಿಕ್ಷಕ ಬಾಲಕೃಷ್ಣ ಕೆ ಮತ್ತು ಶಿಕ್ಷಕಿಯರು, ಶಾಲಾ ಎಸ್ ಡಿ ಎಂಸಿ ಸದಸ್ಯರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here