ಅಕ್ಷಯ ಕಾಲೇಜಿನಲ್ಲಿ ಹೊಸ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

0

ಬಂಟ್ವಾಳ : ಅಕ್ಷಯ ಕಾಲೇಜಿನಲ್ಲಿ ಆ.22 ರಂದು ಶೈಕ್ಷಣಿಕ ವರ್ಷ 2022-23 ಕ್ಕೆ ದಾಖಲಾತಿಗೊಂಡ ಪ್ರಥಮ ಪದವಿ ವಿದ್ಯಾರ್ಥಿಗಳ  ಮಾಹಿತಿ ಕಾರ್ಯಗಾರ ನಡೆಯಿತು. ಸಮಾರಂಭದಲ್ಲಿ ಕಾಲೇಜಿನ ಅಧ್ಯಕ್ಷರಾದ ಶ್ರೀ  ಜಯಂತ ನಡುಬೈಲು  ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಸ್ತುತ ಸಮಾಜದಲ್ಲಿ ವಿದ್ಯಾರ್ಥಿಗಳು ಪಾತ್ರದ ಮಹತ್ವದೊಂದಿಗೆ ವೃತ್ತಿಪರ ಕೋರ್ಸ್ ಗಳಿಂದ ವಿದ್ಯಾರ್ಥಿಗಳಿಗೆ ದೊರಕುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.

ಪ್ರಾಂಶುಪಾಲ ಸಂಪತ್ ಪಕ್ಕಳ  ಕಾಲೇಜಿನ ವೇಳಾಪಟ್ಟಿ ಹಾಗೂ ನಿಯಮಗಳನ್ನು ಮಕ್ಕಳಿಗೆ ತಿಳಿಪಡಿಸಿದರು. ವೇದಿಕೆಯಲ್ಲಿ ಆಡಳಿತಾಧಿಕಾರಿ ಅರ್ಪಿತ್ ಟಿ. ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.

  ಪ್ರಭಾವತಿ ಪ್ರಾರ್ಥಿಸಿ, ಸಂಪತ್ ಪಕ್ಕಳ ಸ್ವಾಗತಿಸಿ, ಶ್ರೀ ಅರ್ಪಿತ್ ಟಿ. ವಂದಿಸಿದರು,  ರಕ್ಷಣ ಟಿ.ಆರ್ ಕಾರ್ಯಕ್ರಮ ನಿರೂಪಿಸಿದರು.

 

 

 

 

LEAVE A REPLY

Please enter your comment!
Please enter your name here