ಪ್ಯಾರಾ ಲೀಗಲ್ ವಾಲೆಂಟಿಯರ್ಸ್ ಆಗಿ ಶಾಂತಿ ಹೆಗಡೆ, ನಯನಾ ರೈ, ಜಗನ್ನಾಥ ಅರಿಯಡ್ಕ ನೇಮಕ

0

ಪುತ್ತೂರು: ಪುತ್ತೂರು ತಾಲೂಕು ಕಾನೂನು ಸೇವೆಗಳ ಸಮಿತಿಯ ಪ್ಯಾರಾ ಲೀಗಲ್ ವಾಲೆಂಟಿಯರ್ಸ್ ಆಗಿ ಶಾಂತಿ ಟಿ. ಹೆಗಡೆ ಕೊಡಿಪ್ಪಾಡಿ, ನಯನಾ ರೈ ನೆಲ್ಲಿಕಟ್ಟೆ ಮತ್ತು ಜಗನ್ನಾಥ ಅರಿಯಡ್ಕರವರು ನೇಮಕಗೊಂಡಿದ್ದಾರೆ.

ಶಾಂತಿ ಹೆಗಡೆಯವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿವೃತ್ತ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿದ್ದು ನಿವೃತ್ತ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ಘಟಕದ ಕೋಶಾಧಿಕಾರಿಯಾಗಿ, ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷರಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.‌

ನಯನಾ ರೈಯವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರಾಗಿದ್ದು ಅಸಹಾಯಕರ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ, ಒಡಿಯೂರು ವಜ್ರಮಾತಾ ಸಂಘಟನೆ ಸಹಿತ ವಿವಿಧ ಸಂಘ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಗನ್ನಾಥ ಅರಿಯಡ್ಕರವರು ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದು ಬಾಲವನ ಸಮಿತಿಯ ಕಾರ್ಯಕ್ರಮ ಸಂಯೋಜಕರಾಗಿದ್ದಾರೆ.

LEAVE A REPLY

Please enter your comment!
Please enter your name here