ಪಾಂಗಳಾಯಿ ಶ್ರೀಕೃಷ್ಣ ಜನ್ಮಾಷ್ಟಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ-ಪೂರ್ವಭಾವಿ ಸಭೆ

0

ಪುತ್ತೂರು : ಪಾಂಗಳಾಯಿ ಶ್ರೀ ಮುಂಡ್ಯತ್ತಾಯ ದೈವಸ್ಥಾನ ಸಮಿತಿ ವತಿಯಿಂದ ಆ.28ರಂದು ನಡೆಯುವ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಪೂರ್ವಭಾವಿ ಸಭೆ ಮುಂಡ್ಯತ್ತಾಯ ದೈವಸ್ಥಾನದ ಸಭಾಂಗಣದಲ್ಲಿ ನಡೆಯಿತು.‌

ಪರಮೇಶ್ವರ ನಾಯ್ಕ ಮತ್ತು ಭಿಮ್ ಭಟ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದರು. ಬಳಿಕ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು. ಮುಂಡ್ಯತ್ತಾಯ ದೈವಸ್ಥಾನ ಸಮಿತಿ ಅಧ್ಯಕ್ಷ ತಾರನಾಥ ರೈ ಬಾಲ್ಯೊಟ್ಟು ಗುತ್ತು, ಕಾರ್ಯದರ್ಶಿ ಪುರುಷೋತ್ತಮ ನಾಕ್, ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷ ಆನಂದ ಗೌಡ ಕಾರ್ಯಕ್ರಮದ ಮಾಹಿತಿ ನೀಡಿದರು. ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಉಮಾಶಂಕರ ನ್ಯಾಕ್ ಸ್ವಾಗತಿಸಿ ವಾಸು ಪೂಜಾರಿ ವಂದಿಸಿದರು.

LEAVE A REPLY

Please enter your comment!
Please enter your name here