ಹಬ್ಬಗಳ ವಾತಾವರಣದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪುತ್ತೂರು ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ಪಥ ಸಂಚಲನ

0

ಪುತ್ತೂರು: ಮುಂದೆ ಬರುವ ದಿನಗಳಲ್ಲಿ ಹಬ್ಬಗಳ ವಾತಾವರಣ ಸಂದರ್ಭ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜನರಿಗೆ ಜಾಗೃತಿ ಮತ್ತು ಧೈರ್ಯ ತುಂಬುವ ನಿಟ್ಟಿನಲ್ಲಿ ಪುತ್ತೂರಿನ ನೂತನ ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ್ ಅವರು ಪುತ್ತೂರು ಪೇಟೆಯಲ್ಲಿ ಪೊಲೀಸ್ ಪಥ ಸಂಚಲನ ನಡೆಸಿದರು.


ಪುತ್ತೂರು ದರ್ಬೆಯಿಂದ ಆರಂಭವಾದ ಪೊಲೀಸ್ ಪಥ ಸಂಚಲನ ಬೊಳುವಾರಿನಲ್ಲಿ ಸಮಾಪನಗೊಂಡಿತ್ತು. ಪುತ್ತೂರು ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ್, ನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸುನಿಲ್ ಕುಮಾರ್, ಎಸ್.ಐ ಶ್ರೀಕಾಂತ್ ರಾಥೋಡ್, ಸಂಪ್ಯ ಪೊಲೀಸ್ ಠಾಣೆ ಎಸ್.ಐ ಉದಯ ರವಿ ಸೇರಿದಂತೆ ಪೊಲೀಸರು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here