ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ವತಿಯಿಂದ ಪದ್ಮವಿಭೂಷಣ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸನ್ಮಾನ

0

ಪುತ್ತೂರು: ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಧರ್ಮಾಧಿಕಾರಿ ಪದ್ಮವಿಭೂಷಣ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ| ಎಂ.ಪಿ ಶ್ರೀನಾಥ್, ಗೌರವ ಕಾರ್ಯದರ್ಶಿ ವಿನಯ ಆಚಾರ್, ಗೌರವ ಕೋಶಾಧ್ಯಕ್ಷ ಬಿ.ಐತ್ತಪ್ಪ ನಾಯ್ಕ್, ಮಂಗಳೂರು ತಾಲೂಕು ಅಧ್ಯಕ್ಷ ಮಂಜುನಾಥ್ ರೇವಣ್ಣರ್, ಮೂಡಬಿದ್ರೆ ತಾಲೂಕು ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ, ಕಡಬದ ಸೇಸಪ್ಪ ರೈ, ಸುಳ್ಯದ ಚಂದ್ರಶೇಖರ್ ಪೇರಾಲ್, ಬೆಳ್ತಂಗಡಿಯ ಡಾ. ಯದುಮತಿ ಗೌಡ, ಜಿಲ್ಲಾ ಸಮಿತಿ ಸದಸ್ಯರಾದ ಅರುಣಾ, ತೇಜಸ್ವಿ ಅಂಬೆಕಲ್ಲು, ರಾಮಚಂದ್ರ ಪಳ್ಳತ್ತಡ್ಕ, ಪೂವಪ್ಪ ನೇರಳಕಟ್ಟೆ, ಮನಮೋಹನ್ ಪುತ್ತೂರು ಉಪಸ್ಥಿತರಿದ್ದರು. ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮಗಳ ವಿವರ ಮತ್ತು ತಾಲೂಕು ಸಮಿತಿಗಳ ಚಟುವಟಿಕೆಗಳ ಬಗ್ಗೆ ಡಾ| ಡಿ. ವೀರೇಂದ್ರ ಹೆಗ್ಗಡೆ ಮಾಹಿತಿ ಪಡೆದು ಕೊಂಡರು. ಇದೇ ಸಂದರ್ಭದಲ್ಲಿ ಪರಿಷತ್ತಿನ ತಿದ್ದುಪಡಿಗೊಳಿಸಿದ ನಿಬಂಧನಾ ಪುಸ್ತಕವನ್ನು ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ನೀಡಲಾಯಿತು.

LEAVE A REPLY

Please enter your comment!
Please enter your name here