ಕೆಮ್ಮಾಯಿಯಲ್ಲಿ ವಿಜ್ರಂಭಿಸಿದ 5ನೇ ವರ್ಷದ ಮೊಸರುಕುಡಿಕೆ ಉತ್ಸವ

0

  • ವೈಭವದ ಶೋಭಾಯಾತ್ರೆ, ಗಮನ ಸೆಳೆದ ಅಟ್ಟಿಮಡಿಕೆ

ಪುತ್ತೂರು: ಶ್ರೀ ವಿಷ್ಣು ಯುವಕ ಮಂಡಲ ಕೆಮ್ಮಾಯಿ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಕೆಮ್ಮಾಯಿ ಇದರ ಜಂಟಿ ಆಶ್ರಯದಲ್ಲಿ ಆ.28ರಂದು ಕೆಮ್ಮಾಯಿ ಓಂ ಅಶ್ವತ್ಥಕಟ್ಟೆ ಬಳಿ ನಡೆದ 5ನೇ ವರ್ಷದ ಮೊಸರು ಕುಡಿಕೆ ಉತ್ಸವವು ವಿವಿಧ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು.

ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಮೂಡಾಯೂರು ಆರಿಗೋ ಪೆರ್ಮುಂಡ ಗರಡಿಯ ಮುಖ್ಯಸ್ಥ ನರೇಂದ್ರ ಪಡಿವಾಳ್ ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮಗಳೊಗೆ ಚಾಲನೆ ನೀಡಿದರು. ವರದರಾಜ ಟ್ರೇಡರ್‍ಸ್‌ನ ಮ್ಹಾಲಕ ವೆಂಕಟ್ರಮಣ ಇಂದಾಜೆ, ಶ್ರೀವಿಷ್ಣು ಯುವಕ ಮಂಡಲದ ಅಧ್ಯಕ್ಷ ಪ್ರವೀಣ್ ನಾಯಕ್, ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಚಿದಾನಂದ ರೈ, ನಗರಸಭಾ ಸದಸ್ಯ ಸುಂದರ ಪೂಜಾರಿ ಬಡಾವು, ವಿಷ್ಣು ಯುವಕ ಮಂಡಲದ ಸದಸ್ಯ ಸುಧಾಕರ ನಾಯಕ್ ಉಪಸ್ಥಿತರಿದ್ದರು.

ಯುವಕ ಮಂಡಲದ ಸದಸ್ಯ ಮಂಜುನಾಥ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಪ್ರಶಾಂತ್ ಕೆಮ್ಮಾಯಿ ಕಾರ್ಯಕ್ರಮ ನಿರೂಪಿಸಿ, ಅಶೋಕ್ ಹೊಸೊಕ್ಲು ವಂದಿಸಿದರು.

ಬಳಿಕ ಮಕ್ಕಳಿಗೆ ಮುದ್ದುಕೃಷ್ಣ ಸ್ಪರ್ಧೆ, ಮಹಿಳೆಯರಿಗೆ ಮತ್ತು ಪುರುಷರಿಗೆ ಹಗ್ಗ ಜಗ್ಗಾಟ ಸ್ಪರ್ಧೆ, ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಪುರುಷರಿಗೆ ವಿಭಿನ್ನ ರೀತಿಯ ಮನೋರಂಜನಾ ಆಟೋಟ ಸ್ಪರ್ಧೆಗಳು ನಡೆಯಿತು.

ವೈಭವದ ಶೋಭಾಯಾತ್ರೆ:
ಸಂಜೆ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯು ನಡೆಯಿತು. ಕೆಮ್ಮಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿಯಿಂದ ಹೊರಟ ಶೋಭಾಯಾತ್ರೆಗೆ ಹಿರಿಯರಾದ ಸಂಜೀವ ನಾಯಕ್ ಕಲ್ಲೇಗ ತೆಂಗಿನ ಕಾಯಿ ಒಡೆದು ಚಾಲನೆ ನೀಡಿದರು. ಬಳಿಕ ಶೋಭಾಯಾತ್ರೆ ಕೆಮ್ಮಾಯಿ ಜಂಕ್ಷನ್, ಕೃಷ್ಣನಗರ, ಆನೆಮಜಲು ಕ್ರಾಸ್ ತನಕ ಸಾಗಿ ನಂತರ ಕೆಮ್ಮಾಯಿ ಜಂಕ್ಷನ್‌ಗೆ ಹಿಂತಿರುಗಿತು. ಶೋಭಾಯಾತ್ರೆಯಲ್ಲಿ ರಸ್ತೆ ಇಕ್ಕೆಲಗಳಲ್ಲಿ ಅಳವಡಿಸಲಾಗಿದ್ದ ಅಟ್ಟಿಮಡಿಕೆ ಒಡೆಯುವ ಸಾಹಸಮಯ ಸ್ಪರ್ಧೆಗಳು ಪ್ರೇಕ್ಷಕರ ಗಮನ ಸೆಳೆಯಿತು. ನಾಸಿಕ್ ಬ್ಯಾಂಡ್, ಕೀಲು ಕುದುರೆ, ಕಲ್ಲಡ್ಕದ ಬೊಂಬೆ ಕುಣಿತ, ಡಿಜೆ ಸದ್ದಿನೊಂದಿಗೆ ಶೋಭಾಯಾತ್ರೆ ಸಾಗಿ ಬಂದಿದೆ. ಸಾವಿರಾರು ಮಂದಿ ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದರು.

ಅಟ್ಟಿ ಮಡಿಕೆ ಒಡೆಯುವ ಸ್ಪರ್ಧೆಯಲ್ಲಿ ಒಟ್ಟು ಐದು ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಕಡಬ ಕೇಪು ಲಕ್ಷ್ಮೀ ಜನಾರ್ದನ ತಂಡ(ಪ್ರ), ಅಶ್ವ ಫ್ರೆಂಡ್ಸ್ ಬೀರ್‍ನಹಿತ್ಲು(ದ್ವಿ), ಬ್ರಹ್ಮನಗರ ಬಜರಂಗದಳ(ತೃ) ಹಾಗೂ ಶಿವಾಜಿ ಫ್ರೆಂಡ್ಸ್ ಪುರುಷರಕಟ್ಟೆ(ಚ) ಬಹುಮಾನಗಳನ್ನು ಪಡೆದುಕೊಂಡಿದೆ.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಉದ್ಯಮಿ ಅಶೋಕ್ ಕುಮಾರ್ ರೈ ರೈ ಎಸ್ಟೇಟ್ ಕೋಡಿಂಬಾಡಿಯವರು ಅಧ್ಯಕ್ಷತೆ ವಹಿಸಿದ್ದರು. ನಗರ ಸಭಾ ಸದಸ್ಯರಾದ ಸುಂದರ ಪೂಜಾರಿ ಬಡಾವು, ಲೀಲಾವತಿ ಕೃಷ್ಣನಗರ, ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಶ್ರೀವಿಷ್ಣು ಯುವಕ ಮಂಡಲದ ಅಧ್ಯಕ್ಷ ಪ್ರವೀಣ್ ನಾಯಕ್, ಮೊಸರುಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಚಿದಾನಂದ ರೈ, ಪ್ರಣಾಮ್ ಎಂಟರ್‌ಪ್ರೈಸಸ್‌ನ ದಯಾನಂದ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮೊಸರುಕುಡಿಕೆ ಉತ್ಸವ ಅಂಗವಾಗಿ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಯುವಕ ಮಂಡಲದ ಸದಸ್ಯ ಮಂಜುನಾಥ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಪ್ರಶಾಂತ್ ಕೆಮ್ಮಾಯಿ ಕಾರ್ಯಕ್ರಮ ನಿರೂಪಿಸಿದರು.

 

LEAVE A REPLY

Please enter your comment!
Please enter your name here