ಕಾರು ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ: ಆರಗ ಜ್ಞಾನೇಂದ್ರ

0

ಬೆಂಗಳೂರು:ಇನ್ನು ಮುಂದೆ ಕಾರು ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಆನಂದಪುರಂನ ಮುರುಘಾ ಮಠದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಈಗ 50 ಸಾವಿರ ಹಾಗೂ 1 ಲಕ್ಷಕ್ಕೂ ಹಳೆ ಕಾರುಗಳು ಸಿಗುತ್ತಿವೆ. ಗಾರೆ ಮಾಡುವವರು, ಮೀನು ಹಿಡಿಯುವವರೂ ಕಾರು ತೆಗೆದುಕೊಂಡು ಹೋಗುತ್ತಾರೆ. ಅಂತವರ ಬಿಪಿಎಲ್ ಕಾರ್ಡ್ ರದ್ದಾಗಿರುವುದು ಸರಿಯಲ್ಲ ಎಂದ ಗೃಹ ಸಚಿವರು, ಈ ವಿಷಯವಾಗಿ ಶಾಸಕ ಎಚ್.ಹಾಲಪ್ಪ ಹರತಾಳು ಹಾಗೂ ನಾನು ಮುಖ್ಯಮಂತ್ರಿ ಬಳಿ ಚರ್ಚಿಸಿದ್ದೇವೆ. ಈ ಕಾನೂನಿನಿಂದ ಬಡವರು ಹೊಂದಿರುವ ಕಾರ್ಡ್ ರದ್ದಾಗುತ್ತದೆ.ಅವರ ಜೀವನಾಧಾರಕ್ಕೆ ತೊಂದರೆ ಆಗುತ್ತದೆ ಎಂದು ಮನವರಿಕೆ ಮಾಡಿದ್ದೇವೆ. ಬಡವರ ಮೇಲೆ ಕರುಣೆ ತೋರಿ ಸಿಎಂ ಆದೇಶ ಹೊರಡಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here