ಸೆ.1: ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಹಾಸಭೆ

0

ಗೃಹೋಪಯೋಗಿ ವಸ್ತುಗಳ ಮಾರಾಟ ಮಳಿಗೆ ‘ಸಹಕಾರಿ ಮಾರ್ಟ್’ ಶುಭಾರಂಭ

ಪುತ್ತೂರು: ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ 2021-22 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆಯು ಸೆ.01 ರಂದು ಬೆಳಿಗ್ಗೆ 11 ಗಂಟೆಗೆ ತಿಂಗಳಾಡಿಯಲ್ಲಿರುವ ಸಂಘದ ಪ್ರಧಾನ ಕಛೇರಿಯ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಶಶಿಧರ್ ರಾವ್ ಕೆ.ಬೊಳಿಕ್ಕಲರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಗೆ ಸಂಘದ ಸದಸ್ಯರೆಲ್ಲರೂ ಸಕಾಲದಲ್ಲಿ ಆಗಮಿಸಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಿ ಸಹಕರಿಸುವಂತೆ ಆಡಳಿತ ಮಂಡಳಿಯ ಅಪ್ಪಣೆ ಮೇರೆಗೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ ಕುಮಾರ್ ರೈ ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಹಕಾರಿ ಮಾರ್ಟ್ ಶುಭಾರಂಭ

ಸಂಘದ ವತಿಯಿಂದ ತಿಂಗಳಾಡಿಯಲ್ಲಿರುವ ಸಂಘದ ಪ್ರಧಾನ ಕಛೇರಿಯ ವಠಾರದಲ್ಲಿ ಆರಂಭಗೊಳ್ಳಲಿರುವ ಹಾಲು, ಹಣ್ಣು, ತರಕಾರಿ ಹಾಗೂ ಸಂಪೂರ್ಣ ಗೃಹೋಪಯೋಗಿ ವಸ್ತುಗಳ ಮಾರಾಟ ಮಳಿಗೆ ‘ಸಹಕಾರಿ ಮಾರ್ಟ್’ ಸೆ.01 ರಂದು ಬೆಳಿಗ್ಗೆ 10 ಗಂಟೆಗೆ ಶುಭಾರಂಭಗೊಳ್ಳಲಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಂಘದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರ ನೀಡುವಂತೆ ಸಂಘೆದ ಅಧ್ಯಕ್ಷ ಶಶಿಧರ ರಾವ್ ಬೊಳಿಕ್ಕಲ, ಉಪಾಧ್ಯಕ್ಷ ಶಿವರಾಮ ಗೌಡ ಇದ್ಯಪೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ ಕುಮಾರ್ ರೈ ಡಿ ಹಾಗೂ ಆಡಳಿತ ಮಂಡಳಿ ನಿರ್ದೇಶಕರು,ಸಿಬ್ಬಂದಿ ವರ್ಗ ಮತ್ತು ಸರ್ವ ಸದಸ್ಯರುಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here