ಬಜತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ; ಶಾಂತಿನಗರ ಶಾಲೆಗೆ ಹಲವು ಪ್ರಶಸ್ತಿ

0

ನೆಲ್ಯಾಡಿ: ಹೊಸಗದ್ದೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆದ ಬಜತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಗೋಳಿತ್ತೊಟ್ಟು ಗ್ರಾಮದ ಶಾಂತಿನಗರ ಸರಕಾರಿ ಹಿ.ಪ್ರಾ.ಶಾಲೆಗೆ ಹಿರಿಯ ಹಾಗೂ ಕಿರಿಯ ವಿಭಾಗದಲ್ಲಿ ಹಲವು ಪ್ರಶಸ್ತಿ ಲಭಿಸಿದೆ.

ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪುನೀತ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಧನುಷ್ ಹಿಂದಿ ಕಂಠಪಾಠದಲ್ಲಿ ದ್ವಿತೀಯ, ಕ್ಲೇಮಾಡೆಲಿಂಗ್‌ನಲ್ಲಿ ತೃತೀಯಾ, ಝಾಹಿಮಾ ಅರೇಬಿಕ್ ಧಾರ್ಮಿಕ ಪಠಣ ಹಾಗೂ ಇಂಗ್ಲಿಷ್ ಕಂಠಪಾಠದಲ್ಲಿ ತೃತೀಯ, ಚೈತ್ರಾ ಹಾಸ್ಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಮಾನ್ಯ ಭಕ್ತಿಗೀತೆಯಲ್ಲಿ ಪ್ರಥಮ ಹಾಗೂ ಲಘು ಸಂಗೀತದಲ್ಲಿ ತೃತೀಯ, ನಿಧಿ ಇಂಗ್ಲಿಷ್ ಕಂಠಪಾಠದಲ್ಲಿ ದ್ವಿತೀಯ, ಧೃತಿ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ, ಪ್ರಾಪ್ತಿ ಸಂಸ್ಕೃತ ಧಾರ್ಮಿಕ ಪಠಣದಲ್ಲಿ ದ್ವಿತೀಯ ಹಾಗೂ ರಕ್ಷಿತ್ ಕ್ಲೇಮಾಡೆಲಿಂಗ್ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ. ಶಾಲಾ ಮುಖ್ಯಶಿಕ್ಷಕ ಪ್ರದೀಪ್ ಬಾಕಿಲ, ಸಹಶಿಕ್ಷಕ ಮಂಜುನಾಥ್ ಹಾಗೂ ಶಿಕ್ಷಕವೃಂದದವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

LEAVE A REPLY

Please enter your comment!
Please enter your name here