ಬುಡೋಳಿ: ಕಾರು – ಟ್ಯಾಂಕರ್ ಮಧ್ಯೆ ಭೀಕರ ಅಪಘಾತ, ನಾಲ್ವರಿಗೆ ಗಾಯ

0

ವಿಟ್ಲ: ಕಾರು ಹಾಗೂ ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಘಟನೆಯಿಂದಾಗಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

 

LEAVE A REPLY

Please enter your comment!
Please enter your name here