ಬೆಟ್ಟಂಪಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ – ವೈಭವದಿ ನಡೆದ ಶೋಭಾಯಾತ್ರೆ

0

ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆದ 37 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶ್ರೀ ಗಣೇಶ ಸ್ವಾಮಿಯ ವೈಭವದ ಶೋಭಾಯಾತ್ರೆ ಸೆ. 1 ರಂದು ನಡೆಯಿತು. ಸಂಜೆ ಶ್ರೀ ಕ್ಷೇತ್ರದಿಂದ ಹೊರಟ ಮೆರವಣಿಗೆಯು ಚೆಲ್ಯಡ್ಕ ಪುಣ್ಯನದಿಯಲ್ಲಿ ಸಮಾಪನಗೊಂಡು ವಿಗ್ರಹದ ಜಲಸ್ತಂಭನ ಮಹೋತ್ಸವ ನಡೆಯಿತು. ಬಳಿಕ ಚೆಲ್ಯಡ್ಕದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಿತು.

ಸಮಿತಿಯ ಗೌರವಾಧ್ಯಕ್ಷ ಮನಮೋಹನ ರೈ ಚೆಲ್ಯಡ್ಕ, ಅಧ್ಯಕ್ಷ ಸೀತಾರಾಮ ಗೌಡ ಮಿತ್ತಡ್ಕ, ಕಾರ್ಯದರ್ಶಿ ಸಂದೀಪ್ ರೈ ಬಾಜುವಳ್ಳಿ, ಕೋಶಾಧಿಕಾರಿ ಪ್ರವೀಣ್ ಪೂಜಾರಿ ಕರ್ನಪ್ಪಾಡಿ, ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಊರ ಪರವೂರ ಭಕ್ತಾಭಿಮಾನಿಗಳು ಪಾಲ್ಗೊಂಡರು. ಸಿಂಗಾರಿ ಮೇಳ, ನಾಸಿಕ್ ಬ್ಯಾಂಡ್, ಭಜನಾ ತಂಡ ಮೆರವಣಿಗೆಗೆ ಮೆರುಗು ನೀಡಿತು.

LEAVE A REPLY

Please enter your comment!
Please enter your name here