ಪ್ರವೀಣ್ ನೆಟ್ಟಾರು ಮುನ್ನಡೆಸುತ್ತಿದ್ದ ಚಿಕನ್ ಸೆಂಟರ್ ಪುನರಾರಂಭ

0

ಹಿಂದೂ ಸಂಘಟನೆಯ ಸಕ್ರೀಯ ಕಾರ್ಯಕರ್ತ ಯತೀಶ್ ಮಾಲಕತ್ವದಲ್ಲಿ ಪುನರಾರಂಭ

ಪುತ್ತೂರು:ಜು.26ರಂದು ಹಂತಕರಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ಮಾಲಕತ್ವದ ಅಕ್ಷಯ ಚಿಕನ್ ಸೆಂಟರ್ ಪುನರಾರಂಭಗೊಳ್ಳುತ್ತಿದೆ. ಮಾಸ್ತಿಕಟ್ಟೆಯಲ್ಲಿರುವ ಈ ಅಂಗಡಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಸಕ್ರೀಯ ಸದಸ್ಯ ಯತೀಶ್ ಮುರ್ಕೆತ್ತಿ ಮಾಲಕತ್ವದಲ್ಲಿ ಪುನರಾರಂಭಗೊಳ್ಳುತ್ತಿದೆ.ಯತೀಶ್ ಈ ಹಿಂದೆ ಎಬಿವಿಪಿಯಲ್ಲಿ ಜಿಲ್ಲಾ ಸಂಚಾಲಕರಾಗಿ ಬಳಿಕ ಸುಳ್ಯ ತಾಲೂಕು ಜವಬ್ದಾರಿಯಲ್ಲಿ ತೊಡಗಿಸಿಕೊಂಡಿದ್ದರು.ಯತೀಶ್ ಕೋಳಿ ಸಾಕಾಣಿಕೆಯನ್ನು ಮಾಡುತ್ತಿದ್ದು ಇದೀಗ ಚಿಕನ್ ಸೆಂಟರ್ ಪ್ರಾರಂಭಿಸುತ್ತಿದ್ದಾರೆ.ಮತಾಂಧ ಶಕ್ತಿಗಳಿಗೆ ಹೆದರದೆ ವ್ಯವಹಾರವನ್ನು ಮುಂದುವರೆಸುತ್ತಿದ್ದೇನೆ.ಮತಾಂಧ ಶಕ್ತಿಗಳ ನೀಚ ಕೆಲಸಕ್ಕೆ ಹಿಂದೂ ಸಮಾಜ ಎಂದಿಗೂ ಎದೆಗುಂದುವುದಿಲ್ಲ ಎಂಬ ಸಂದೇಶವನ್ನು ಈ ಮೂಲಕ ನೀಡುತ್ತಿದ್ದೇನೆ.ಈ ಅಂಗಡಿಯು ಅಕ್ಷಯ ಚಿಕನ್ ಸೆಂಟರ್ ಹೆಸರಿನಲ್ಲೇ ಮುಂದುವರೆಯಲಿದ್ದು ಗ್ರಾಹಕರು ಸಹಕರಿಸಬೇಕು ಎಂದು ಸುದ್ದಿಯೊಂದಿಗೆ ಯತೀಶ್ ಅಭಿಪ್ರಾಯ ಹಂಚಿಕೊಂಡರು.

LEAVE A REPLY

Please enter your comment!
Please enter your name here