ಸೆ.4 : ಕುರಿಯ ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟದಿಂದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಊರ ಗೌಡರುಗಳಿಗೆ ಗೌರವಾರ್ಪಣೆ

0

ಕುರಿಯ: ಒಕ್ಕಲಿಗ ಗೌಡ ಸೇವಾ ಸಂಘ ಕುರಿಯ, ಗ್ರಾಮ ಸಮಿತಿ, ಯುವ ಘಟಕ, ಮಹಿಳಾ ಘಟಕ ಇವುಗಳ ಸಹಕಾರದೊಂದಿಗೆ ಒಕ್ಕಲಿಗ ಸ್ವ ಸಹಾಯ ಸಂಘದ ಒಕ್ಕೂಟ ಕುರಿಯ ಇದರ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ, ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಊರ ಗೌಡರುಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ಸೆ.4 ರಂದು ಸಮಯ ಬೆಳಿಗ್ಗೆ 9.30 ಗಂಟೆಗೆ ಉಳ್ಳಾಲ ಕುರಿಯ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ.

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯುರು ಅಧ್ಯಕ್ಷತೆ ವಹಿಸಲಿದ್ದಾರೆ. ನ್ಯಾಯಾಂಗ ಇಲಾಖೆಯ ನಿವೃತ್ತ ಶಿರಸ್ತೆದಾರ ಜೆ. ಶಿವರಾಮ ಗೌಡ ಜಾಡೆಂಕಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಅಧ್ಯಕ್ಷ ಡಿ.ವಿ ಮನೋಹರ್, ತಾಲೂಕು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ನಾಗೇಶ್ ಗೌಡ ಕೆಡೆಂಜಿ ಹಾಗೂ ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ ಡಿ. ಗೌಡ, ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನಿರ್ದೇಶಕ ಮಧು ಗೌಡ ನರಿಯೂರು ಮತ್ತು ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಕುಂಬ್ರ ವಲಯದ ಅಧ್ಯಕ್ಷ ಲೋಕೇಶ್ ಚಾಕೋಟೆ, ನಿವೃತ್ತ ಪೊಲೀಸ್ ಅಧಿಕಾರಿ ಆನಂದ ಗೌಡ ನೈತಾಡಿ ಭಾಗವಹಿಸಲಿದ್ದಾರೆ. ಗ್ರಾಮದ ಎಲ್ಲಾ ಸಮಾಜ ಬಾಂಧವರು ಪಾಲ್ಗೊಳ್ಳುವಂತೆ ಒಕ್ಕಲಿಗ ಸ್ವಸಹಾಯ ಗುಂಪುಗಳ ಒಕ್ಕೂಟದ ಅಧ್ಯಕ್ಷ ಹರೀಶ್ ಗೌಡ ಕರೆಜ್ಜ, ಗ್ರಾಮ ಸಮಿತಿ ಅಧ್ಯಕ್ಷ ರಮಾನಾಥ ಗೌಡ ಸಂಪ್ಯ ಬೈಲಾಡಿ, ಯುವ ಘಟಕದ ಅಧ್ಯಕ್ಷ ರಾಜೇಶ್ ಗೌಡ ಕೈಂತಿಲ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here