ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆ-ನಿಖರವಾದ ಬೆಳೆ ದಾಖಲಾತಿಗೆ ರೈತರಿಗೊಂದು ಸುವರ್ಣಾವಕಾಶ

0

ಪುತ್ತೂರು:  2022-23ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಪ್ರಾರಂಭಗೊಂಡಿದ್ದು ರೈತರೇ ಮೊಬೈಲ್ ಉಪಯೋಗಿಸಿ ಬೆಳೆ ಸಮೀಕ್ಷೆ ಕಾರ್ಯವನ್ನು ಮಾಡಬಹುದಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಪ್ರಾರಂಭಗೊಂಡ ಈ ಯೋಜನೆ ಈ ಬಾರಿಯು ಮುಂದುವರಿದಿದೆ.ಸ್ವತಂತ್ರವಾಗಿ ಅಪ್ಲೋಡ್ ಸಾಧ್ಯವಾಗದಿದ್ದಲ್ಲಿ ಖಾಸಗಿಯವರ ಸಹಭಾಗಿತ್ವ ಪಡೆಯಬಹುದು. ಅದೂ ಅಸಾಧ್ಯವಾದರೆ ತೋಟಗಾರಿಕೆ, ಕೃಷಿ ಇಲಾಖೆಯ ಸಿಬ್ಬಂದಿಯ ಸಹಾಯ ಪಡೆದು ಬೆಳೆ ಸಮೀಕ್ಷೆ ಕಾರ್ಯವನ್ನು ಮಾಡಬಹುದಾಗಿರುತ್ತದೆ.

ಆ್ಯಪ್ ಬಳಕೆ ವಿಧಾನ ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್‌ನ್ನು ಅಭಿವೃದ್ಧಿ ಪಡಿಸಲಾಗಿದ್ದು, ರೈತರು Google Play Store ನಿಂದ kharif farmer crop Survey 2022-23 ಎಂದು type ಮಾಡಿ ಅಥವಾ https://play.google.com/store/apps/detailsid=com.csk.Khariffarmer22_23.cropsurvey                      

ಈ ಲಿಂಕ್ ಬಳಸಿ Kharif Farmer Crop Survey 2022-23 ಆ್ಯಪ್‌ನ್ನು ಡೌನ್‌ಲೋಡ್ ಮಾಡಿ ನಂತರ ಆಧಾರ್ ಸಂಖ್ಯೆ ದಾಖಲಿಸಿ, ತದನಂತರ ಆಧಾರ್ ಗೆ  ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಗೆ OTP ಬರಲಿದೆ. OTPಯನ್ನು ದಾಖಲಿಸಿದರೆ, F ಆಧಾರ್ ಗೆ  ಜೋಡಣೆಯಾಗಿರುವ FID ನಂಬರ್ ಮತ್ತು ಸರ್ವೆ ನಂಬರ್ ಗಳು ಡೌನ್‌ಲೋಡ್ ಆಗುತ್ತದೆ. ಸರಿಯಾದ ಸರ್ವೆ ನಂಬರ್ ಆಯ್ಕೆ ಮಾಡಿ ಸರ್ವೆ ನಂಬರ್‌ಗಳಡಿ ರೇಖೆಯೊಳಗೆ ನಿಂತು ಬೆಳೆ ವಿವರವನ್ನು ದಾಖಲಿಸಿ ಫೋಟೋ ತೆಗೆದು ಮಾಹಿತಿಯನ್ನು ಅಪ್‌ಲೋಡ್ ಮಾಡುವುದು, ಬೆಳೆ ಸಮೀಕ್ಷೆ ಮಾಹಿತಿಯನ್ನು ಪ್ರಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಬೆಳೆ ವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುವುದು. ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ಯಾವುದೇ ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ತಾವೇ ದಾಖಲಿಸಲು ಸರ್ಕಾರದಿಂದ ಸುವರ್ಣಾವಕಾಶವನ್ನು ಕಲ್ಪಿಸಿದ್ದು, ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುವುದು. ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಮೊಬೈಲ್ ಆ್ಯಪ್‌ನಲ್ಲಿ ತಮ್ಮ ಜಮೀನಿನ ಸರ್ವೆ ನಂಬರ್‌ವಾರು ಬೆಳೆ ವಿವರವನ್ನು ನಿಖರವಾಗಿ ದಾಖಲಿಸಿ ಮುಂಗಾರು-2022ರ ಬೆಳೆ ಸಮೀಕ್ಷೆ ಕಾರ್ಯವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಬೇಕೆಂದು ಸಹಾಯಕ ಕೃಷಿ ನಿರ್ದೇಶಕರು, ಪುತ್ತೂರುರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

                                                                                   

LEAVE A REPLY

Please enter your comment!
Please enter your name here