ಬೆಳಂದೂರು ಗ್ರಾ.ಪಂ; ಜಮಾಬಂದಿ ಸಭೆ

0

ಕಾಣಿಯೂರು: 2021-22ನೇ ಸಾಲಿನ ಬೆಳಂದೂರು ಗ್ರಾ.ಪಂ ಜಮಾಬಂಧಿ ಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ.3 ರಂದು ನಡೆಯಿತು. ಗ್ರಾ.ಪಂ.ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಶಿಕ್ಷಣ ಸಂಯೋಜಕ ಹರಿಪ್ರಸಾದ್ ಜಮಾಬಂದಿ ಅಧಿಕಾರಿಯಾಗಿ ಭಾಗವಹಿಸಿದ್ದರು.

ಗ್ರಾ.ಪಂ.ಉಪಾಧ್ಯಕ್ಷೆ ತೇಜಾಕ್ಷಿ ಕೊಡಂಗೆ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ನಾರಾಯಣ ಕೆ, ಗ್ರಾ.ಪಂ. ಸದಸ್ಯರಾದ ಪ್ರವೀಣ್ ಕೆರೆನಾರು, ಜಯರಾಮ ಬೆಳಂದೂರು, ಪಾರ್ವತಿ ಮರಕ್ಕಡ, ತಾರಾ ಅನ್ಯಾಡಿ, ಕುಸುಮಾ ಅಂಕಜಾಲು, ಹರಿಣಾಕ್ಷಿ ಬನಾರಿ ಉಪಸ್ಥಿತರಿದ್ದರು. ಸಿಬ್ಬಂದಿ ಗೀತಾ ಲೆಕ್ಕಪತ್ರಗಳ ದಾಖಲೆಗಳನ್ನು ಓದಿದರು. ಬಳಿಕ ಗ್ರಾಮ ಪಂಚಾಯತ್ ಲೆಕ್ಕಪತ್ರಗಳ ದಾಖಲೆ ಮತ್ತು ನಿರ್ವಹಿಸಿದ ಕಾಮಗಾರಿಗಳ ತಪಾಸಣೆ ನಡೆಸಲಾಯಿತು.

LEAVE A REPLY

Please enter your comment!
Please enter your name here