ಪೆರಿಯಡ್ಕ ಹಾಲು ಉತ್ಪಾದಕರ ಸಂಘಕ್ಕೆ ದ್ವಿತೀಯ ಬಹುಮಾನ

0

ಉಪ್ಪಿನಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ೨೦೨೧-೨೨ನೇ ಸಾಲಿನ ತಾಲೂಕುವಾರು ಉತ್ತಮ ಸಂಘದಲ್ಲಿ ಪುತ್ತೂರು ತಾಲೂಕಿನ ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘವು ದ್ವಿತೀಯ ಬಹುಮಾನವನ್ನು ಪಡೆದಿದೆ ಹಾಗೂ ಇದೇ ಸಂಘದ ಸದಸ್ಯ ವಸಂತ ಕೆ. ಅವರು ಹಸಿರು ಮೇವು ಅಭಿವೃದ್ಧಿ ಪಡಿಸಿದ ಉತ್ತಮ ಹೈನುಗಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಮಂಗಳೂರಿನಲ್ಲಿ ನಡೆದ ಒಕ್ಕೂಟದ ಮಹಾಸಭೆಯಲ್ಲಿ ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಜಗದೀಶ್ ರಾವ್ ಮಣಿಕ್ಕಳ ಹಾಗೂ ಕಾರ್ಯದರ್ಶಿ ಶ್ರೀಮತಿ ಮಧುಷಾ ಅವರನ್ನು ಸಂಘದ ಪರವಾಗಿ ಗೌರವಿಸಿ, ಪ್ರಶಸ್ತಿ ನೀಡಿ ಗೌರವಿಸಲಾಯಿತು ಹಾಗೂ ಸದಸ್ಯ ವಸಂತ ಕೆ. ಅವರಿಗೂ ಇದೇ ಸಂದರ್ಭ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಉಪಾಧ್ಯಕ್ಷ ಜಯರಾಮ ರೈ ಬಳೆಜ್ಜ, ಒಕ್ಕೂಟದ ನಿರ್ದೇಶಕರುಗಳು, ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾದ ಸದಾನಂದ ಶೆಟ್ಟಿ ಕಿಂಡೋವು, ಬಾಲಚಂದ್ರ ಕೆ., ಸತೀಶ್ ರಾವ್, ವನಿತಾ, ಸುಮತಿ ಹಾಗೂ ಸಿಬ್ಬಂದಿ ಸುರೇಶ್ ಗೌಂಡತ್ತಿಗೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here