ಭಾರತ ಕಟ್ಟಡ ಕಾರ್ಮಿಕ ಸಂಘದಿಂದ ಆರೋಗ್ಯ ತಪಾಸಣಾ ಶಿಬಿರ

0

ಪುತ್ತೂರು: ಭಾರತ ಕಟ್ಟಡ ಕಾರ್ಮಿಕ ಸಂಘದ ವತಿಯಿಂದ ಸೆ. 4ರಂದು ಆರೋಗ್ಯ ತಪಾಸಣಾ ಶಿಬಿರವು ಬೊಳುವಾರು ಬೈಪಾಸ್ ರಸ್ತೆ ಅಶ್ಮಿ ಕಂಫರ್ಟ್‌ನ ಹಾಲ್‌ನಲ್ಲಿ ನಡೆಯಿತು.

ಹಾಲ್‌ನ ಮಾಲಕ ಸಂತೋಷ್ ಕುಮಾರ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಕಾರ್ಮಿಕರು ಕೆಲಸದ ಒತ್ತಡದಲ್ಲಿ ತಮ್ಮ ಆರೋಗ್ಯ ಕಾಪಾಡಲು ಉದಾಸೀನ ಮಾಡುತ್ತಾರೆ ಆದ್ದರಿಂದ ಕಾರ್ಮಿಕರ ಆರೋಗ್ಯದ ಬಗ್ಗೆ ಸರ್ಕಾರವೇ ಮುತುವರ್ಜಿ ವಹಿಸಿರುವುದು ಅಭಿನಂದನೀಯ ಎಂದರು. ಸಂಘದ ಗೌರವಾಧ್ಯಕ್ಷ ಲೋಕೇಶ ಹೆಗ್ಡೆಯವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿಸಂಘದ ಅಧ್ಯಕ್ಷ ಇನಾಸ್ ವೇಗಸ್, ಕಾರ್ಯಾಧ್ಯಕ್ಷ ಪೌಲ್ ಡಿಸೋಜ, ಡಾ.ಅಂಜಿಯಾ, ಪ್ರದೀಪ್, ರುಕ್ಮಯ ಗೌಡ, ಬಶೀರ್ ಅಹ್ಮದ್ ಉಪಸ್ಥಿತರಿದ್ದರು ಅಧ್ಯಕ್ಷ ಇನಾಸ್ ವೇಗಸ್ ವಂದಿಸಿದರು. ನೂರಾರು ಕಾರ್ಮಿಕರು ಮತ್ತು ಅವರ ಕುಟುಂಬದವರು ಇದರ ಪ್ರಯೋಜನ ಪಡೆದುಕೊಂಡರು.

LEAVE A REPLY

Please enter your comment!
Please enter your name here