ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ ಬಿದರಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಮದಾಸ್ ಗೌಡರ ಮನೆಗೆ ಭೇಟಿ

0

ಪುತ್ತೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಎಂ ಬಿದರಿ ಅವರು ಸೆ.5 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ‌ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಮದಾಸ್ ಗೌಡ ಅವರ ಮನೆಗೆ ಭೇಟಿ ನೀಡಿದರು.

ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರೂ ಮತ್ತು ನಿವೃತ್ತ ಎಸ್ಪಿ ಆಗಿರುವ ರಾಮದಾಸ್ ಗೌಡ ಅವರು ಶಂಕರ ಬಿದಿರಿ ಅವರ ಜೊತೆಯಲ್ಲಿ ಕರ್ತವ್ಯ ನಿರ್ವಹಿಸಿದ ಹಿನ್ನಲೆಯಲ್ಲಿ ತನ್ನ ಶಿಷ್ಯನ ಮನೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ರಾಮದಾಸ್ ಗೌಡರ ಸಹೋದರರಾದ ರಾಧಾಕೃಷ್ಣ ಗೌಡ, ಕಿಶೋರ್ ನೆಲ್ಲಿಕಟ್ಟೆ ಮತ್ತು ರಾಮದಾಸ್ ಗೌಡ ಅವರ ಪತ್ನಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here