ಮಣ್ಣಾಪು ಶ್ರೀ ಕೊರಗಜ್ಜ ಕ್ಷೇತ್ರದಿಂದ ಡಾ.ಎಂ.ಕೆ ಪ್ರಸಾದ್‌ರವರಿಗೆ ಸನ್ಮಾನ

0

ಪುತ್ತೂರು: ಮೊಟ್ಟೆತ್ತಡ್ಕ ಕೆಮ್ಮಿಂಜೆ-ಮಣ್ಣಾಪು ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದ ಗೌರವಾಧ್ಯಕ್ಷರಾದ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರ ನೇತೃತ್ವದಲ್ಲಿ ಮಣ್ಣಾಪು ಕ್ಷೇತ್ರದ ಆಡಳಿತ ಸಮಿತಿಯು ಆದರ್ಶ ಆಸ್ಪತ್ರೆಗೆ ತೆರಳಿ ಇತ್ತೀಚೆಗೆ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್(ಐಎಂಎ)ರವರು ವೈದ್ಯರ ದಿನಾಚರಣೆಯ ಅಂಗವಾಗಿ ಕೊಡಮಾಡುವ ಪ್ರತಿಷ್ಠಿತ ಡಾಕ್ಟರ್ರ್‍ಸ್ ಡೇ ಪ್ರಶಸ್ತಿ ಸ್ವೀಕರಿಸಿದ ಆದರ್ಶ ಆಸ್ಪತ್ರೆಯ ಸರ್ಜನ್ ಡಾ.ಎಂ.ಕೆ ಪ್ರಸಾದ್‌ರವರಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಎಂ.ಕೆ ಪ್ರಸಾದ್‌ರವರು, ರವೀಂದ್ರ ಶೆಟ್ಟಿ ನುಳಿಯಾಲುರವರನ್ನು ನಾನು ಹತ್ತಿರದಿಂದ ಬಲ್ಲವನಾಗಿದ್ದೇನೆ. ಮಣ್ಣಾಪು ಶ್ರೀ ಕೊರಗಜ್ಜ ಕ್ಷೇತ್ರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವುದು ಶ್ರೀ ಕೊರಗಜ್ಜನ ಮಹಿಮೆಯಾಗಿದೆ. ರವೀಂದ್ರ ಶೆಟ್ಟಿ ನುಳಿಯಾಲುರವರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾಗುವ ಯೋಗ ಕೂಡಿ ಬರಲಿ ಎಂದು ಹೇಳಿ ಸನ್ಮಾನಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಣ್ಣಾಪು ಶ್ರೀ ಕ್ಷೇತ್ರದ ಗೌರವಾಧ್ಯಕ್ಷರಾದ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರೊಂದಿಗೆ ಶ್ರೀ ಕ್ಷೇತ್ರದ ಅಧ್ಯಕ್ಷ ವಿಶ್ವನಾಥ್ ಮಣ್ಣಾಪು-ಕೆಮ್ಮಿಂಜೆ, ಗೌರವ ಸಲಹೆಗಾರರಾದ ಉಪೇಂದ್ರ ಬಲ್ಯಾಯ, ದಾಮೋದರ್ ಪಾಟಾಳಿ, ಗಿರಿಧರ್ ಗೌಡ ಆಮೈ, ಸುಜೀರ್ ಕುಮಾರ್ ಶೆಟ್ಟಿ ನುಳಿಯಾಲು, ಟ್ರಸ್ಟಿಗಳಾದ ವಿಶ್ವನಾಥ ಪೂಜಾರಿ ಮೊಟ್ಟೆತ್ತಡ್ಕ, ಯಶವಂತ ನಾಯಕ್ ಪೇರಾಜೆ, ವಿಶ್ವನಾಥ್ ನಾಯ್ಕ್ ಅಮ್ಮುಂಜ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here