ಇರ್ದೆ ಬೆಟ್ಟಂಪಾಡಿ ಪ್ರಾ.ಕೃ.ಪ.ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

0

  • ರೂ. 80.18 ಲಕ್ಷ ನಿವ್ವಳ ಲಾಭ, ಪ್ರಪ್ರಥಮ ಬಾರಿಗೆ ಶೇ. 11 ಡಿವಿಡೆಂಡ್ ಘೋಷಣೆ

ಬೆಟ್ಟಂಪಾಡಿ: ಇರ್ದೆ ಬೆಟ್ಟಂಪಾಡಿ ಪ್ರಾ.ಕೃ.ಪ.ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಕೆ.ಎಸ್. ರಂಗನಾಥ ರೈ ಗುತ್ತುರವರ ಅಧ್ಯಕ್ಷತೆಯಲ್ಲಿ ಸೆ. 7 ರಂದು ಸಂಘದ ಸಭಾಭವನದಲ್ಲಿ ನಡೆಯಿತು.

ಸಂಘದ ನಿರ್ದೇಶಕರೂ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಸಂಘದ ಅಭಿವೃದ್ಧಿಯ ಕುರಿತಾಗಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಂಘದ ಅಧ್ಯಕ್ಷ ರಂಗನಾಥ ರೈ ಗುತ್ತು ವರದಿ ಮಂಡಿಸಿ, ನಿವ್ವಳ ಲಾಭ ಮತ್ತು ಡಿವಿಡೆಂಡು ಘೋಷಣೆ ಮಾಡಿದರು.

ಉಪಾಧ್ಯಕ್ಷ ಗಿರೀಶ್ವರ ಭಟ್ ಬಾಳೆಗುಳಿ, ನಿರ್ದೇಶಕರಾದ ಕರುಣಾಕರ ಶೆಟ್ಟಿ ಕೊಮ್ಮಂಡ, ಶೇಷಪ್ಪ ರೈ ಮೂರ್ಕಾಜೆ, ಸದಾಶಿವ ರೈ, ನಾಗರಾಜ ಕಜೆ, ಚಂದ್ರನ್ ತಲೆಪ್ಪಾಡಿ, ಹರೀಶ್ ಗೌಡ ಗುಮ್ಮಟೆಗದ್ದೆ, ದೇವಪ್ಪ ನಾಯ್ಕ, ಆಶಾ ಅರವಿಂದ, ದೀಪಿಕಾ ಪಿ. ರೈ, ಎಸ್‌ಸಿಡಿಸಿಸಿ ಬ್ಯಾಂಕ್ ವಲಯ ಮೇಲ್ವಿಚಾರಕ ವಸಂತ ಎಸ್. ಉಪಸ್ಥಿತರಿದ್ದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಮಯ್ಯ ರೈ ಪಿ. ಲೆಕ್ಕಪತ್ರ‌ ಮಂಡಿಸಿದರು. ಸಹಾಯಕ ಕಾರ್ಯನಿರ್ವಹಣಾಧಿಕಾರಿ ಲಿಂಗಪ್ಪ ಗೌಡ ವಂದಿಸಿದರು. ಆಶಾ ಅರವಿಂದ ಹಾಗೂ ದೀಪಿಕಾ ಪಿ. ರೈ ಪ್ರಾರ್ಥಿಸಿದರು. ಸಂಘದ ಸದಸ್ಯರು ವಿವಿಧ ಸಲಹೆ ಸೂಚನೆಗಳನ್ನು ನೀಡಿದರು.

LEAVE A REPLY

Please enter your comment!
Please enter your name here