ರೈತ ಮುಖಂಡರಿಂದ ಸಮಾಲೋಚನೆ; ಮನೆ ಹರಾಜು ಪ್ರಕ್ರಿಯೆ ಸ್ಥಗಿತ

0

ಉಪ್ಪಿನಂಗಡಿ: ರೈತಾಪಿ ಮಹಿಳೆಯೋರ್ವರ ಮನೆಯ ಹರಾಜಿಗೆ ಮುಂದಾಗಿದ್ದ ಸಿಂಡಿಕೇಟ್ ಬ್ಯಾಂಕ್ ರೈತ ಸಂಘದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಹರಾಜು ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದೆ.

ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ರೈತಾಪಿ ಮಹಿಳೆಯೋರ್ವರ ಮನೆ ಹರಾಜು ಪ್ರಕ್ರಿಯೆಗೆ ಸಿಂಡಿಕೇಟ್ ಬ್ಯಾಂಕ್ ಉಪ್ಪಿನಂಗಡಿ ಶಾಖೆಯು ಮುಂದಾಗಿತ್ತು. ಈ ಬಗ್ಗೆ ಮಹಿಳೆಯು ರೈತ ಸಂಘಕ್ಕೆ ದೂರು ನೀಡಿದ್ದು, ಇದಕ್ಕೆ ಸ್ಪಂದಿಸಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಂಚಾಲಕ ರೂಪೇಶ್ ರೈ ಅವರ ನೇತೃತ್ವದಲ್ಲಿ ರೈತ ಸಂಘದ ಬೆಳ್ತಂಗಡಿ ತಾಲೂಕು ಪ್ರಧಾನ ಕಾರ್ಯದರ್ಶಿ ವಿನೋದ್ ಭಟ್, ಕಾರ್ಯದರ್ಶಿ ಸತೀಶ್, ರೈತ ಮುಖಂಡರಾದ ಮುರಳೀಧರ ರೈ ಮಠಂತಬೆಟ್ಟು ಮತ್ತಿತರರು ಬ್ಯಾಂಕಿಗೆ ತೆರಳಿ ಬ್ಯಾಂಕ್ ವ್ಯವಸ್ಥಾಪಕರಲ್ಲಿ ಮಾತುಕತೆ ನಡೆಸಿದರು. ಬಳಿಕ ಬ್ಯಾಂಕ್ ಮನೆ ಹರಾಜು ಪ್ರಕ್ರಿಯೆನ್ನು ಸ್ಥಗಿತಗೊಳಿಸಿತು.

LEAVE A REPLY

Please enter your comment!
Please enter your name here