ಪುತ್ತೂರು ನಗರ ಪೊಲೀಸ್ ಠಾಣೆ ಎ.ಎಸ್.ಐ ಕವಿತಾ ಪಿ ಉಪ್ಪಿನಂಗಡಿಗೆ, ಬಂಟ್ವಾಳ ಗ್ರಾಮಾಂತರ ಠಾಣೆಯ ಎ.ಎಸ್.ಐ ಕೃಷ್ಣಪ್ಪ ಎಮ್ ಪುತ್ತೂರಿಗೆ ವರ್ಗಾವಣೆ

0

 

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎ.ಎಸ್.ಐ ಕವಿತಾ ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಮತ್ತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎ.ಎಸ್.ಐ ಕೃಷ್ಣಪ್ಪ ಎಮ್ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.


ಕವಿತಾ ಪಿ ಅವರು ಈ ಹಿಂದೆ ಉಪ್ಪಿನಂಗಡಿ ಠಾಣೆಯಲ್ಲಿ ಹೆಡ್‌ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಭಡ್ತಿಗೊಂಡು ಪುತ್ತೂರು ನಗರ ಠಾಣೆಗೆ ವರ್ಗಾವಣೆಗೊಂಡಿದ್ದರು. ಇದೀಗ ಮತ್ತೆ ಉಪ್ಪಿನಂಗಡಿ ಠಾಣೆಗೆ ವರ್ಗಾವಣೆ ಗೊಂಡಿದ್ದಾರೆ. ವೈಟ್ ಲಿಫ್ಟಿಂಗ್ ನಲ್ಲಿ ರಾಜ್ಯ ರಾಷ್ಟ್ರಮಟ್ಟದಲ್ಲಿ ಹಲವಾರು ಪ್ರಶಸ್ತಿ ಪಡೆದು ಕ್ರೀಡೆಯ ಮೂಲಕ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ಕೃಷ್ಣಪ್ಪ ಎಮ್ ಅವರು ಈ ಹಿಂದೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದು ಅಲ್ಲಿಂದ ಎ.ಎಸ್.ಐ ಆಗಿ ಭಡ್ತಿಗೊಂಡು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಇದೀಗ ಬಂಟ್ವಾಳದಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here