ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಜನ್ಮದಿನಾಚರಣೆಯ ಅಂಗವಾಗಿ ವಾಹನ ಜಾಥಾ

0

ಪುತ್ತೂರು: `ಒಂದೇ ಜಾತಿ, ಒಂದೇ ಮತ, ಒಂದೇ ದೇವರು’ ಎಂಬ ಅತ್ಯಪೂರ್ವ ಸಂದೇಶವನ್ನು ಮನುಕುಲಕ್ಕೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 168ನೇ ಜನ್ಮ ದಿನಾಚರಣೆಯ ಅಂಗವಾಗಿ ಸೆ.8ರಂದು ಸಂಜೆ ಬಿಲ್ಲವ ಸಂಘದ ವತಿಯಿಂದ ಪುತ್ತೂರಿನಲ್ಲಿ ವಾಹನ ಜಾಥಾ ನಡೆಯಿತು.

ದರ್ಬೆ ಬೈಪಾಸ್ ಅಶ್ವಿನಿ ವೃತ್ತದ ಬಳಿಯಿಂದ ಹೊರಟ ವಾಹನ ಜಾಥಾಕ್ಕೆ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ತೆಂಗಿನ ಕಾಯಿ ಒಡೆದು ಚಾಲನೆ ನೀಡಿದರು. ಬಳಿಕ ಜಾಥಾವು ದರ್ಬೆ ಬೈಪಾಸ್ ಬಳಿಯಿಂದ ಹೊರಟು ಮುಖ್ಯ ರಸ್ತೆಯ ಮೂಲಕ ಸಾಗಿ ಶ್ರೀಧರ ಭಟ್ ಅಂಗಡಿ ಬಳಿಯಿಂದ ಮಾರ್ಕೆಟ್ ರಸ್ತೆ ತಾಲೂಕು ಆಡಳಿತ ಸೌಧದ ಬಳಿಯಿಂದಾಗಿ ಬಿಲ್ಲವ ಸಂಘದ ಸಭಾ ಭವನದ ಬಳಿ ಸಮಾಪನಗೊಂಡಿತು. ಸಂಘದ ಪದಾಧಿಕಾರಿಗಳು, ಮಹಿಳಾ ಘಟಕ, ಯುವವಾಹಿನಿ, ವಿವಿಧ ವಲಯಗಳ ಸಂಚಾಲಕರು, ಗ್ರಾಮ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಜಾಥಾದಲ್ಲಿ ಭಾಗವಹಿಸಿದರು.

 

LEAVE A REPLY

Please enter your comment!
Please enter your name here